Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಮಹಾ ಪರಿನಿಬ್ಬಾಣ ದಿನಾಚರಣೆ ಆಚರಿಸಲಾಗಿದೆ.ಡಾ. ಬಿ.ಆರ್.ಅಂಬೇಡ್ಕರ್ ರವರ 65ನೇ ವರ್ಷದ ಮಹಾ ಪರಿನಿಬ್ಬಾಣ ದಿನಾಚರಣೆಯ ಪ್ರಯುಕ್ತ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗಿದೆ.ಬಿಬಿಎಂಪಿ ಆಡಳಿತಗಾರರು, ಮುಖ್ಯ ಆಯುಕ್ತರಿಂದ ಮಾಲಾರ್ಪಣೆ ಹಾಗೂ ಪುಷ್ಪನಮನ ಸಲ್ಲಿಸಿದರು.
ಇನ್ನೂ ವಿಧಾನಾಸೌಧದ ಪೂರ್ವ ದಿಕ್ಕಿನಲ್ಲಿರುವ ಡಾ..ಬಿ ಆರ್ ಅಂಬೇಡ್ಕರ್ ಪ್ರತಿಮೆಗೆ ಸಿಎಂ ಬೊಮ್ಮಾಯಿ ಮಾಲಾರ್ಪಣೆ ಮಾಡಿದರು.ಸಮಾಜ ಕಲ್ಯಾಣ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಿದ್ದು,ಕಾರ್ಯಕ್ರಮದಲ್ಲಿ ಸಿಎಂ ಸೇರಿದಂತೆ ಸಚಿವರಾದ ಅಶ್ವಥ್ ನಾರಾಯಣ, ಗೋವಿಂದ ಕಾರಜೋಳ, ಕೋಟ ಶ್ರೀನಿವಾಸ,ಮಾಜಿ ಸಚಿವ ಆಂಜನೇಯ ಹಾಗೂ ವಿವಿಧ ಸಂಘಟನೆಯ ಮುಖಂಡರು ಭಾಗಿಯಾಗಿದ್ದಾರೆ.