Webdunia - Bharat's app for daily news and videos

Install App

ನಮ್ಮ ಮೆಟ್ರೋ ಟಿಕೆಟ್ ಬೆಲೆ ಏರಿಕೆ ಬೇಕಿತ್ತಾ, ಬೆಂಗಳೂರು ತುಂಬಾ ವಾಯುಮಾಲಿನ್ಯ, ಟ್ರಾಫಿಕ್

Krishnaveni K
ಗುರುವಾರ, 6 ಮಾರ್ಚ್ 2025 (09:52 IST)
ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ಬೆಲೆ ಏರಿಕೆ ಮಾಡಿದ್ದೇ ಮಾಡಿದ್ದು, ಈಗ ಬೆಂಗಳೂರಿನಲ್ಲಿ ವಾಯುಮಾಲಿನ್ಯ, ಟ್ರಾಫಿಕ್ ಹೆಚ್ಚಾಗಿದೆ ಎಂದು ವರದಿ ಬಂದಿದೆ.

ಕಳೆದ ತಿಂಗಳಷ್ಟೇ ಏಕಾಏಕಿ ಮೆಟ್ರೋ ಪ್ರಯಾಣ ದರ ಏರಿಕೆಯಾಗುತ್ತದೆ. ಏಕಾಏಕಿ ಟಿಕೆಟ್ ದರ ದುಪ್ಪಟ್ಟಾಗಿದ್ದರಿಂದ ಮಧ್ಯಮ ವರ್ಗದ ಜನ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದರು. ಹಲವರು ನಿತ್ಯ ಅನಿವಾರ್ಯವಾಗಿ ಸಂಚರಿಸುವವರನ್ನು ಬಿಟ್ಟರೆ ಉಳಿದವರು ಮೆಟ್ರೋಗೆ ಗುಡ್ ಬೈ ಹೇಳಿದ್ದಾರೆ.

ಇತ್ತೀಚೆಗೆ ಮೆಟ್ರೋ ನಿಲ್ದಾಣಗಳಲ್ಲಿ ಮೊದಲಿನಷ್ಟು ಪ್ರಯಾಣಿಕರಿಲ್ಲ. ಹಲವು ಜನ ಮೆಟ್ರೋ ಬಳಸುವುದನ್ನೇ ಬಿಟ್ಟಿದ್ದಾರೆ. ಮೆಟ್ರೋ ಪ್ರಯಾಣ ದರ ಏರಿಕೆಯಾಗಿರುವುದರಿಂದ ಅನೇಕರು ಖಾಸಗಿ ವಾಹನ, ಕ್ಯಾಬ್ ಇಲ್ಲವೇ ಬಸ್ ಕಡೆಗೆ ಮುಖ ಮಾಡಿದ್ದಾರೆ.

ಇದರಿಂದಾಗಿ ನಗರದಲ್ಲಿ ಈಗ ಖಾಸಗಿ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಟ್ರಾಫಿಕ್ ಜಾಮ್ ಹೆಚ್ಚಾಗಿದೆ. ಸಹಜವಾಗಿಯೇ ವಾಹನಗಳ ದಟ್ಟಣೆಯಿಂದ ನಗರದಲ್ಲಿ ವಾಯುಮಾಲಿನ್ಯವೂ ಮಿತಿ ಮೀರಿದೆ. ನಗರದಲ್ಲಿ ಟ್ರಾಫಿಕ್ ದಟ್ಟಣೆ ಕಡಿಮೆ ಮಾಡಬೇಕು ಆ ಮೂಲಕ ವಾಯುಮಾಲಿನ್ಯ ಕಡಿಮೆ ಮಾಡಬೇಕು ಎಂಬ ಉದ್ದೇಶದಿಂದಲೇ ಮೆಟ್ರೋ ಆರಂಭಿಸಲಾಗಿತ್ತು. ಆದರೆ ಈಗ ಆ ಉದ್ದೇಶವೇ ಈಡೇರುತ್ತಿಲ್ಲ. ಹಾಗಿದ್ದ ಮೇಲೆ ಮೆಟ್ರೋದಿಂದ ಏನು ಉಪಯೋಗವಾಯ್ತು ಎಂದು ಜನ ಕೇಳುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments