Webdunia - Bharat's app for daily news and videos

Install App

ಯುಗಾದಿ ಊರಿಗೆ ತೆರಳುವವರಿಗೆ ಬಸ್ ದರ ಶಾಕ್: ಬೆಂಗಳೂರಿನಲ್ಲಿ ಊರುಗಳಿಗೆ ಟಿಕೆಟ್ ದರ ಎಷ್ಟಾಗಿದೆ ನೋಡಿ

Krishnaveni K
ಮಂಗಳವಾರ, 25 ಮಾರ್ಚ್ 2025 (10:33 IST)
ಬೆಂಗಳೂರು: ಈ ವಾರಂತ್ಯದಲ್ಲಿ ಯುಗಾದಿ ಹಬ್ಬವಿದೆ ಎಂದು ಊರಿಗೆ ತೆರಳಲು ತಯಾರಿ ಮಾಡಿಕೊಂಡಿದ್ದವರಿಗೆ ಬಸ್ ದರ ನೋಡಿ ಶಾಕ್ ಆಗುವಂತಿದೆ. ಬೆಂಗಳೂರಿನಿಂದ ರಾಜ್ಯದ ವಿವಿಧ ಊರುಗಳಿಗೆ ತೆರಳಲು ಬಸ್ ದರ ಎಷ್ಟಾಗಿದೆ ನೋಡಿ.

ಖಾಸಗಿ ಬಸ್ ಮಾತ್ರವಲ್ಲದೆ ಕೆಎಸ್ ಆರ್ ಟಿಸಿ ಬಸ್ ಗಳ ದರವೂ ಏರಿಕೆಯಾಗಿದೆ. ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಸಾಮಾನ್ಯ ದಿನಗಳಲ್ಲಿ ಇರುವ ದರಕ್ಕಿಂತ 200-300 ರೂ.ಗಳಷ್ಟು ಏರಿಕೆಯಾಗಿದೆ. ಖಾಸಗಿ ಬಸ್ ಗಳಲ್ಲಂತೂ ಎರಡು ಪಟ್ಟು ಹೆಚ್ಚಾಗಿದೆ.

ಹಬ್ಬದ ಸಂದರ್ಭದಲ್ಲಿ ಊರಿಗೆ ತೆರಳುವವರ ಸಂಖ್ಯೆ ಜಾಸ್ತಿ. ಇದನ್ನೇ ಬಂಡವಾಳ ಮಾಡಿಕೊಂಡು ಬಸ್ ದರವನ್ನೂ ಹೆಚ್ಚಿಸಲಾಗುತ್ತದೆ. ಖಾಸಗಿ ಬಸ್ ಗಳಂತೂ ಮಿತಿಯಿಲ್ಲದೇ ಏರಿಕೆ ಮಾಡುತ್ತವೆ.  ಇದೀಗ ಬೆಂಗಳೂರಿನಿಂದ ಬೇರೆ ಬೇರೆ ಊರುಗಳಿಗೆ ತೆರಳಲು ಬಸ್ ದರವೆಷ್ಟು ನೋಡಿ.

ಖಾಸಗಿ ಬಸ್ ದರ
ಬೆಂಗಳೂರು-ಮಂಗಳೂರು ಸಾಮಾನ್ಯವಾಗಿ 650 ರಿಂದ 1300 ರೂ.ಗಳಿದ್ದರೆ ಈಗ 1200 ರಿಂದ 4000 ರೂ.ವರೆಗೆ ತಲುಪಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೂ ಈಗ 1200 ರಿಂದ 4200 ರೂ.ವರೆಗೆ ದರವಿದೆ. ಬೆಂಗಳೂರಿನಿಂದ ಧಾರವಾಡಕ್ಕಂತೂ 1000 ರೂ.ಗಳಿಂದ 5000 ರೂ.ವರೆಗೆ ಟಿಕೆಟ್ ದರ ತಲುಪಿದೆ. ಬೆಂಗಳೂರಿನಿಂದ ಹಾಸನಕ್ಕೆ 750 ರೂ.ಗಳಿಂದ 1600 ರೂ.ವರೆಗೆ ದರವಾಗಿದೆ.

ಹೆಚ್ಚಿನ ಊರುಗಳಿಗೆ ಟಿಕೆಟ್ ದರ ಖಾಸಗಿ ಬಸ್ ನಲ್ಲಿ ಸರಿಯಾಗಿ ದುಪ್ಪಟ್ಟಾಗಿದ್ದರೆ ಇತ್ತ ಕೆಎಸ್ ಆರ್ ಟಿಸಿಯಲ್ಲೂ ಕಡಿಮೆಯೇನಲ್ಲ. ಬೆಂಗಳೂರಿನಿಂದ ವಿವಿಧ ಊರುಗಳಿಗೆ ತೆರಳುವ ಎಲ್ಲಾ ಮಾದರಿಯ ಬಸ್ ದರದಲ್ಲೂ 200-300 ರೂ.ಗಳಷ್ಟು ಹೆಚ್ಚಳವಾಗಿದೆ. ಕೇವಲ ಕೆಎಸ್ ಆರ್ ಟಿಸಿ ನಾರ್ಮಲ್ ಬಸ್ ನಲ್ಲಿ ಮಾತ್ರ ಎಂದಿನಂತೆ ಟಿಕೆಟ್ ದರವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments