Webdunia - Bharat's app for daily news and videos

Install App

ರಾಜ್ಯದ ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

Webdunia
ಭಾನುವಾರ, 18 ಜುಲೈ 2021 (19:39 IST)
ಬೆಂಗಳೂರು: ಪೂರ್ವ ಅರಬ್ಬೀಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಜುಲೈ 21ರಂದು ಬಂಗಾಳ ಉಪಸಾಗರದ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಹೆಚ್ಚಿನ ಸಾಧ್ಯತೆಯಿದೆ. ಇದರ ಪ್ರಭಾವದಿಂದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 18ರಿಂದ 22ರವರೆಗೆ ಗುಡುಗಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆಯಿದೆ. 
 
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಗುಡುಗಿನಿಂದ ಕೂಡಿದ ಭಾರಿ ಹಾಗೂ ಅತಿಭಾರಿ ಮಳೆ ನಿರೀಕ್ಷಿಸಲಾಗಿದ್ದು, ಕೆಲವೊಮ್ಮೆ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜು.18 ಮತ್ತು 19ರಂದು ರೆಡ್ ಅಲರ್ಟ್ ಹಾಗೂ ಜುಲೈ 20 ರಿಂದ 22ರವರೆಗೆ ಆರೆಂಜ್ ಘೊಷಿಸಲಾಗಿದೆ. 
 
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರ್ಗಿ, ಯಾದಗಿರಿ, ವಿಜಾಪುರ, ಬಾಗಲಕೋಟೆ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಜುಲೈ 18, 19ರಂದು ಆರೆಂಜ್ ಅಲರ್ಟ್, ಜುಲೈ 21 ಮತ್ತು 22ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಹವಾಮಾನ ಇಲಾಖೆ ಪ್ರಾಾದೇಶಿಕ ನಿರ್ದೆಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾಾರೆ.
 
ರಾಜ್ಯಾದ್ಯಂತ ಮುಂಗಾರು ಚುರುಕು:
ರಾಜ್ಯಾದ್ಯಂತ ಭಾನುವಾರ ನೈರುತ್ಯ ಮುಂಗಾರು ಚುರುಕಾಗಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 21 ಸೆಂ.ಮೀ, ದಾವಣಗೆರೆಯ ಉಚ್ಚಂಗಿದುರ್ಗದಲ್ಲಿ 20 ಸೆಂ.ಮೀ, ಉತ್ತರ ಕನ್ನಡದ ಶಿರಾಲಿಯಲ್ಲಿ 18 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments