ರಾಜ್ಯಾದ್ಯಂತ ಮುಂದಿನ ಐದು ದಿನ ವ್ಯಾಪಕ ಮಳೆ; ಎಲ್ಲೆಡೆ ಐ ಅಲರ್ಟ್ ಘೋಷಣೆ

Webdunia
ಮಂಗಳವಾರ, 20 ಜುಲೈ 2021 (20:54 IST)
ಬೆಂಗಳೂರು: ಪೂರ್ವ ಅರಬ್ಬೀಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಇದರ ಪ್ರಭಾವದಿಂದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಿಣ ಒಳನಾಡಿನ ಬಹುತೇಕ ಎಲ್ಲ ಸ್ಥಳಗಳಲ್ಲಿ ಜುಲೈ 23ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. 
 
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 20ರಂದು ಯೆಲ್ಲೋ ಅಲರ್ಟ್, ಜುಲೈ 21, 22 ಹಾಗೂ 23 ರಂದು ಆರೆಂಜ್ ಅಲರ್ಟ್ ಕೊಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಕೆಲವೆಡೆ ಗುಡುಗಿನಿಂದ ಕೂಡಿದ ಭಾರಿ ಹಾಗೂ ಅತಿಭಾರಿ ಮಳೆ ನಿರೀಕ್ಷಿಸಲಾಗಿದೆ. ಜುಲೈ 20, 21 ಹಾಗೂ 22ರಂದು ಯೆಲ್ಲೋ ಅಲರ್ಟ್, ಜುಲೈ 23ರಂದು ಆರೆಂಜ್ ಅಲರ್ಟ್ ಕೊಡಲಾಗಿದೆ.
 
ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಜುಲೈ 22 ಮತ್ತು 23ರಂದು ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೆಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
 
ಹಲವೆಡೆ ವ್ಯಾಪಕ ಮಳೆ:
 
ನೈರುತ್ಯ ಮುಂಗಾರು ಸೋಮವಾರ ದಕ್ಷಿಣ ಒಳನಾಡಿನಲ್ಲಿ ತೀವ್ರವಾಗಿತ್ತು. ಉತ್ತರ ಒಳನಾಡಿನಲ್ಲಿ ಸಕ್ರೀಯ ಹಾಗೂ ಕರಾವಳಿಯಲ್ಲಿ ಸಾಮಾನ್ಯವಾಗಿದ್ದು, ಹಲವೆಡೆ ವ್ಯಾಪಕ ಮಳೆಯಾಗಿದೆ. ದಕ್ಷಿಣ ಕನ್ನಡದ ಮುಲ್ಕಿಯಲ್ಲಿ 10 ಸೆಂ.ಮೀ, ಉತ್ತರ ಕನ್ನಡದ ಭಟ್ಕಳ, ಕಲಬುರ್ಗಿಯ ಗುಂಡಗುರ್ತಿಯಲ್ಲಿ ತಲಾ 9 ಸೆಂ.ಮೀ, ಶಿವಮೊಗ್ಗದ ಹುಂಚದಕಟ್ಟೆ, ಅಗ್ರಹಾರ, ಕೋಣಂದೂರು, ಅರಸಾಳು, ಉಡುಪಿಯ ಕೊಲ್ಲೂರಿನಲ್ಲಿ ತಲಾ 8 ಸೆಂ.ಮೀ, ಶಿರಾಲಿ, ಕೋಟದಲ್ಲಿ ತಲಾ 7 ಸೆಂ.ಮೀ, ಉತ್ತರ ಕನ್ನಡದ ಮಂಕಿ, ಹೊನ್ನಾವರ, ಯದಗಿರಿಯ ಭೀಮಾರಾಯನಗುಡಿ, ಕವಡಿಮಟ್ಟಿ, ಕಲಬುರ್ಗಿಯ ಸೇಡಂ, ತೀರ್ಥಹಳ್ಳಿ, ಭಾಗಮಂಡಲ, ದಾವಣಗೆರೆಯ ಹರಪನಹಳ್ಳಿಯಲ್ಲಿ ತಲಾ 6 ಸೆಂ.ಮೀ. ಎಂದು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೇರಳಕ್ಕೆ ಮಳೆ ನಿರೀಕ್ಷೆ, ಕರ್ನಾಟಕದಲ್ಲಿ ಮಳೆಯಿರುತ್ತಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments