Webdunia - Bharat's app for daily news and videos

Install App

ಬೆಂಗಳೂರು ಮಳೆಯಿಂದ ಅವಾಂತರವಾಗಿದ್ದರೆ ಈ ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡಬಹುದು

Krishnaveni K
ಬುಧವಾರ, 16 ಅಕ್ಟೋಬರ್ 2024 (10:19 IST)
ಬೆಂಗಳೂರು: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಯಾಗಿದೆ. ಈ ನಡುವೆ ಮಳೆಯಿಂದಾದ ಅವಾಂತರಗಳಿಂದ ಜನರ ಸಮಸ್ಯೆ ಆಲಿಸಲು ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ರಂಗಕ್ಕಿಳಿದಿದ್ದಾರೆ.

ಬಿಬಿಎಂಪಿ ವಾರ್ ರೂಂಗೆ ಎಂಟ್ರಿ ಕೊಟ್ಟಿರುವ ಡಿಕೆ ಶಿವಕುಮಾರ್ ಸ್ವತಃ ತಾವೇ ಜನರ ಕರೆಗಳಿಗೆ ಉತ್ತರಿಸಿದ್ದಾರೆ. ನಗರದಲ್ಲಿ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿದ್ದು, ಕೆಲವೆಡೆ ಕೊಳಚೆ ನೀರು ಮನೆಯೊಳಗೇ ನುಗ್ಗಿದೆ. ಇದರಿಂದಾಗಿ ಜನ ಪರದಾಡುವಂತಾಗಿದೆ.

ಜನರು ಅವ್ಯವಸ್ಥೆಗೆ ಬಿಬಿಎಂಪಿಗೆ ಹಿಡಿಶಾಪ ಹಾಕುತ್ತಿದ್ದಾರೆ. ವಿಶೇಷವಾಗಿ ನಿನ್ನೆ ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್, ಮಾನ್ಯತಾ ಟೆಕ್ ಪಾರ್ಕ್ ಬಳಿ ರಸ್ತೆಯಿಡೀ ಜಲಾವೃತವಾಗಿದ್ದ ಫೋಟೋ ಎಲ್ಲೆಡೆ ವೈರಲ್ ಆಗಿದೆ. ಇಂದೂ ಕೂಡಾ ಮಳೆಯ ವಾತಾವರಣ ಮುಂದುವರಿದಿದೆ.

ಅಕ್ಟೋಬರ್ 19 ರವರೆಗೂ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಹೀಗಾಗಿ ಸಮಸ್ಯೆಗಳು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಯಶವಂತಪುರ ಠಾಣಾ ವ್ಯಾಪ್ತಿಯ ರಾಜಕುಮಾರ್ ಸಮಾಧಿ ರಸ್ತೆಯಲ್ಲಿ ಮರ ಬಿದ್ದಿರುವ ಕಾರಣ ರಸ್ತೆ ಸಂಚಾರ ಬಂದ್ ಆಗಿದೆ. ಮಾನ್ಯತಾ ಟೆಕ್ ಪಾರ್ಕ್ ಬಳಿ ರಸ್ತೆಯಲ್ಲಿ ನೀರು ತುಂಬಿದ್ದ ಕಾರಣ ಇಂದೂ ಕೂಡಾ ಸಂಚಾರಕ್ಕೆ ಅಡಚಣೆಯಾಗಲಿದೆ. ಯಾವುದೇ ತುರ್ತು ಸಂದರ್ಭದಲ್ಲಿ 112 ಸ್ಥಾನಕ್ಕೆ ಕರೆ ಮಾಡಿ ಎಂದು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments