Webdunia - Bharat's app for daily news and videos

Install App

ಬಾರ್ ಬೆಂಡಿಂಗ್ ಕೆಲಸ ಮಾಡುವ ಹುಡುಗನಿಗೆ ಪಿಯುಸಿಯಲ್ಲಿ 2ನೇ ರ್ಯಾಂಕ್!

Webdunia
ಭಾನುವಾರ, 19 ಜೂನ್ 2022 (14:00 IST)

ಗದಗ ಜಿಲ್ಲೆಯ ರೋಣ ತಾಲೂಕಿನ ನೆರೇಗಲ್ ಅನ್ನದಾನೇಶ್ವರ ಪಿಯು ಕಾಲೇಜ್ ವಿದ್ಯಾರ್ಥಿ ಶಿವರಾಜ್ ಡಿ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವ ಮೂಲಕ ಜಿಲ್ಲೆಯೆ ಹೆಮ್ಮೆ ಪಡುವಂತೆ ಮಾಡಿದ್ದಾನೆ..

ಪಿಯುಸಿ ಕಲಾ ವಿಭಾಗದಲ್ಲಿ 600 ಕ್ಕೆ 593 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಎರಡನೇ ರ್ಯಾಂಕ್ ಗಳಿಸಿದ್ದಾರೆ. ಇತಿಹಾಸ, ಅರ್ಥಶಾಸ್ತ್ರ, ಭೂಗೋಳಶಾಸ್ತ್ರ, ರಾಜ್ಯಶಾಸ್ತ್ರ ವಿಷಗಳಲ್ಲಿ ಶಿವರಾಜ್ ನೂರಕ್ಕೆ ನೂರು ಅಂಕ ಪಡೆದಿದ್ದಾನೆ. ಕನ್ನಡ 98, ಇಂಗ್ಲೀಷ್ 95 ಅಂಕ ಪಡೆದು ಕಲಾ ವಿಭಾಗದಲ್ಲಿ ಸಾಧನೆ ಮಾಡಿದ್ದಾರೆ.

ರಾಯಚೂರು ಮೂಲದ ಶಿವರಾಜ್ ಪಿಯು ವ್ಯಾಸಾಂಗಕ್ಕೆ ನೆರೇಗಲ್ ಅನ್ನದಾನೇಶ್ವರ ಪಿಯು ಕಾಲೇಜು ಸೇರಿಕೊಂಡಿದ್ರು. ಸೋದರ ಮಾವ ಲಿಂಗಪ್ಪ ಸೂಚನೆಯಂತೆ ನೆರೇಗಲ್ ಸೇರಿದ್ದ ಶಿವರಾಜ್ ಶ್ರೆದ್ಧೆಯಿಂದ ಕಲೆಯುತ್ತಿದ್ದಾರೆ. ಲಿಂಗಸಗೂರು ತಾಲೂಕಿನ ಯರಗಟ್ಟ ಗ್ರಾಮದಲ್ಲಿ ತಂದೆ ತಾಯಿ ಕೂಲ ಕೆಲಸ ಮಾಡ್ಕೊಂಡು ಜೀವನ ನಡೆಸ್ತಿದ್ರೆ ಓದಿನಲ್ಲಿ ಸಾಧನೆ ಮಾಡ್ಬೇಕು ಅನ್ನೋ ಹಂಬಲ ಹೊಂದಿರೋ ಶಿವರಾಜ್ ನೆರೇಗಲ್ ನಲ್ಲಿ ಇದ್ದು ಕಲೆಯುತ್ತಿದ್ದರು..

ಶಿವರಾಜ್ ಮೂಲ ರಾಯಚೂರು ಕಾಲೇಜು ಅಭ್ಯಾಸ ಮಾಡ್ತಿದ್ದ ಊರು ನೆರೇಗಲ್.. ಆದ್ರೆ, ಸದ್ಯ ಶಿವರಾಜ್ ಕೂಲಿ ಕೆಲಸಕ್ಕೆ ಅಂತಾ ತುಮಕೂರು ಸೇರಿದಾರೆ. ಏಳನೇ ಕ್ಲಾಸ್ ಇದ್ದಾಗಿನಿಂದಲೂ ಶಿವರಾಜ್ ದುಡಿದೇ ಕಲೀತಿರೋದಂತೆ. ತಿಂಗಳು ರಜೆಯಲ್ಲಿ ಕೆಲಸ ಮಾಡಿ ಉಳಿದ ಹಣವನ್ನೇ ವಿದ್ಯಾಭ್ಯಾಸಕ್ಕೆ ಶಿವರಾಜ್ ಬಳಸ್ತಾರೆ. ಪಿಯು ರಿಸರ್ಟ್ ಬರೋ ಹೊತ್ತಿಗೆ ಶಿವರಾಜ್ ಬಾರ್ ಬೆಂಡಿಂಗ್ ಕೆಲಸಕ್ಕೆ ಅಂತಾ ತುಮಕೂರು ತೆರಳಿದ್ರು.

ರ್ಯಾಂಕ್ ಬಂದಿರೋ ವಿಚಾರ ಶಿವರಾಜ್ ಗೆ ಫೋನ್ ಮೂಲಕ ತಿಳಿದಿದೆ. ಸಹ ಕೆಲಸಗಾರರಿಗೂ ವಿಷ್ಯ ತಿಳಿದಿದೆ, ಸ್ಥಳಕ್ಕೆ ಕೇಕ್ ತರೆಸಿದ್ದ ಗೌಂಡಿ, ಮೇಸ್ತ್ರಿಗಳು ಶಿವರಾಜ್ ಸಾಧನೆಯನ್ನ ಸಂಭ್ರಮಿಸಿದ್ದಾರೆ.‌

ಐಎಎಸ್ ಪರೀಕ್ಷೆ ಪಾಸ್ ಮಾಡ್ಬೇಕು ಅಂತಾ ಕನಸು ಕಾಣ್ತಿರೋ ಶಿವರಾಜ್ ಈಗಿನಿಂದಲೇ ತಯಾರಿ ನಡೆಸಿದಾರೆ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳುತ್ತಿದ್ದಾರಂತೆ. ಐವರು ಸಹೋದರರು, ಮೂವರು ಸಹೋದರಿಯರ ಪೈಕಿ ಶಿವರಾಜ್ ಮೂರನೇಯವರು. ಅಣ್ಣ ಗಾರೆ ಕೆಲಸ ಮಾಡಿದ್ರೆ ತಂದೆ ತಾಯಿ ಕೂಲಿ ಮಾಡ್ತಾರೆ.. ಮೂರು ಎಕರೆ ಜಮೀನು ನಂಬ್ಕೊಂಡು ಜೀವನ ನಡೀತಿದೆ. ಯಾರಿಗೂ ಹೊರೆಯಾಗದೇ ಶಿಕ್ಷಣ ಪಡೆಯಬೇಕು ಅನ್ನೋದು ಶಿವರಾಜ್ ಛಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments