Daily Horoscope

ಬಿಎಸ್‌ವೈ ಧರ್ಮವಂತರಾ?ಬಿಜೆಪಿ ಧರ್ಮವಂತ ಪಕ್ಷವೇ?: ಸಚಿವ ರಾಯರೆಡ್ಡಿ

Webdunia
ಸೋಮವಾರ, 13 ಮಾರ್ಚ್ 2017 (13:10 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಧರ್ಮವಂತರಾ?ಯಾವ ಧರ್ಮದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ಪ್ರಶ್ನಿಸಿದ್ದಾರೆ. 
 
ಬಿಜೆಪಿ ಬಾಯಿಯಲ್ಲಿ ರಾಮನಾಮ ಬಗಲಲ್ಲಿ ಚೂರಿ, ಗೋವಾ, ಮಣಿಪುರ ರಾಜ್ಯದಲ್ಲಿ ಜನರು ಬಹುಮತ ನೀಡದಿದ್ದರೂ ಸರಕಾರ ರಚನೆ ಮಾಡುತ್ತಿರುವುದು ಧರ್ಮವಂತ ಕೆಲಸಾನಾ? ಎಂದು ತಿರುಗೇಟು ನೀಡಿದ್ದಾರೆ.
 
ವಾಮಮಾರ್ಗದ ಮೂಲದ ಅಧಿಕಾರಕ್ಕಾಗಿ ಹಪಹಪಿಸುತ್ತಿರುವ ಬಿಜೆಪಿ, ಕೀಳು ರಾಜಕಾರಣ ಮಾಡಿಯಾದರೂ ಅಧಿಕಾರ ಕಬಳಿಸಲು ಯತ್ನಿಸುತ್ತಿದೆ. ಆದರೆ, ಜನತೆ ಇಂತಹ ವಿಚ್ಚಿದ್ರಕಾರಿ ಶಕ್ತಿಗಳಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಪ್ರಾಮಾಣಿಕವಾಗಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸುತ್ತಿದ್ದರೂ ಬಿಜೆಪಿ ಮುಖಂಡರು ಮನಬಂದಂತೆ ಆರೋಪಿಸುತ್ತಿದ್ದಾರೆ ಎಂದು ಕಿಡಿಕಾರಿದರು.
 
ಯಡಿಯೂರಪ್ಪ ನೇತೃತ್ವದ ಬಿಜೆಪಿ ಪಕ್ಷಕ್ಕೆ ಜನತೆ ಅಧಿಕಾರಕ್ಕೆ ಕೊಟ್ಟು ನೋಡಿದ್ದಾರೆ.ಅಧಿಕಾರದಲ್ಲಿದ್ದಾಗ ಯಾವ ರೀತಿ ಜನಪರ ಕಾರ್ಯನಿರ್ವಹಿಸಿದ್ದಾರೆ ಎನ್ನುವುದು ಜನತೆಗೆ ತಿಳಿದಿದೆ. ಆದ್ದರಿಂದ ಜನತೆ ಮತ್ತೊಮ್ಮೆ ಇಂತಹ ತಪ್ಪು ಮಾಡಲು ಹೋಗುವುದಿಲ್ಲ ಎಂದು ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments