Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಯಲಹಂಕದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಇಂದು ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಮಳೆಯಿಂದ ಜಲಾವೃತಗೊಂಡ ಯಲಹಂಕದ ಕೇಂದ್ರೀಯ ವಿಹಾರದ ಅಪಾರ್ಟ್ ಮೆಂಟ್ ನ ನಿವಾಸಿಗಳನ್ನು ಎನ್ ಡಿಆರ್ ಎಫ್, ಅಗ್ನಿ ಶಾಮಕ ಹಾಗೂ ಬಿಬಿಎಂಪಿ ಸಿಬ್ಬಂದಿಗಳ ತಂಡಗಳು ರಕ್ಷಿಸಿ, ಅವರಿಗೆ ಆಹಾರ ಪದಾರ್ಥಗಳನ್ನು ವಿತರಿಸಿದ್ದು, ಯಾವುದೇ ರೀತಿ ಸಮಸ್ಯೆಗಳು ಆಗದೇ ರೀತಿ ಮುಂಜಾಗ್ರತಾ ಕ್ರಮ ವಹಿಸಲಾಗಿದೆ ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ವಿಶ್ವನಾಥ್, ಬಿಬಿಎಂಪಿಯ ಜಂಟಿ ಆಯುಕ್ತರಾದ ಪೂರ್ಣಿಮಾ ಸೇರಿದಂತೆ ಬಿಬಿಎಂಪಿ ಅಧಿಕಾರಿಗಳು ಉಪಸ್ಥಿತರಿದ್ದರು.