Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನಗರದಲ್ಲಿ ಮಳೆ ಸುರಿದರೆ ಆಗುವ ಅನಾಹುತಗಳನ್ನು ತಪ್ಪಿಸಲು ರಾಜಕಾಲುವೆ ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಅಕ್ರಮ ಕಟ್ಟಡಗಳು, ನಿವಾಸದ ಮನೆಗಳನ್ನು ತೆರವುಗೊಳಿಸುವ ತನ್ನ ಎರಡನೇ ದಿನದ ಕಾರ್ಯಾಚರಣೆಯನ್ನು ಬಿಬಿಎಂಪಿ ಇಂದು ಮಂಗಳವಾರ ಮುಂದುವರಿಸಿದೆ.
ರಾಜಕಾಲುವೆ ಒತ್ತುವರಿಯಾಗಿರುವ ಕಟ್ಟಡಗಳ ಬಗ್ಗೆ ಬಿಬಿಎಂಪಿ ಪಟ್ಟಿ ಮಾಡಿದ್ದು, 600 ಒತ್ತುವರಿ ಕಟ್ಟಡಗಳ ತೆರವಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ರಾಜಕಾಲುವೆ ಒತ್ತುವರಿ ಕಾರ್ಯ ಮುಂದುವರೆದಿದ್ದು, ಮಹದೇವಪುರ ಭಾಗದಲ್ಲಿ ಬಿಬಿಎಂಪಿ ರಾಜಕಾಲುವೆ ಒತ್ತುವರಿ ತೆರವು ಮಾಡುತ್ತಿದೆ. ಪ್ರತಿಷ್ಠಿತ ವಿಲ್ಲಾಗಳು, ಶಿಕ್ಷಣ ಸಂಸ್ಥೆ, ಮನೆಗಳು ಒತ್ತುವರಿ ಕಾರ್ಯಾಚರಣೆಗೆ ನೆಲಸಮವಾಗುತ್ತಿವೆ.