ಮಂತ್ರಿ ಮಾಲ್ ಗೆ ಬೀಗ ಜಡಿದ ಬಿಬಿಎಂಪಿ

Webdunia
ಗುರುವಾರ, 30 ಸೆಪ್ಟಂಬರ್ 2021 (21:26 IST)
ಬೆಂಗಳೂರು: ಬಿಬಿಎಂಪಿ ಕಂದಾಯ ಬಾಕಿ ಉಳಿಸಿಕೊಂಡ ಹಿನ್ನೆಲೆ ಪಶ್ಚಿಮ ವಲಯ ಅಧಿಕಾರಿಗಳು ಮಾಲ್ ಗೆ ಬೀಗ ಜಡಿದರು. ಎಚ್ಚತ್ತ ಮಾಲ್ ಮಾಲೀಕರು 5 ಕೋಟಿ ರೂ. ಕಂದಾಯ ಪಾವತಿಸಿದ್ದು, ತೆರೆಯಲು ಅವಕಾಶ ನೀಡಲಾಯಿತು.
ಮಂತ್ರಿ ಮಾಲ್ ಬರೋಬ್ಬರಿ 39 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಕೇವಲ 5 ಕೋಟಿ ರೂ. ಡಿಡಿ ಪಾವತಿ ಮಾಡಿದ ಕೂಡಲೇ ಬೀಗ ತೆರೆಯಲು ಅವಕಾಶ ಕೊಟ್ಟಿದೆ. ಬಿಬಿಎಂಪಿಯ ಈ ನಡೆ ಸಾರ್ವಜನಿಕರ ಟೀಕೆಗೆ ಒಳಗಾಗಿದೆ.
2017 ರಿಂದಲೂ ಮಂತ್ರಿ ಮಾಲ್ ತೆರಿಗೆ ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿದೆ. ಬಡ್ಡಿ ಹಣವೂ ಸೇರಿ 39 ಕೋಟಿ ರೂ ಬಾಕಿಯಾಗಿದೆ. ಹಲವು ಬಾರಿ ನೋಟಿಸ್​ ನೀಡಿದರೂ ಕ್ಯಾರೆ ಎನ್ನದ ಮಂತ್ರಿ ಮಾಲ್ ಆಡಳಿತ ವರ್ಗಕ್ಕೆ ಈ ಹಿಂದೆಯೂ ಬೀಗ ಹಾಕಿ ಬಿಸಿ ಮುಟ್ಟಿಸಲಾಗಿತ್ತು. ತೆರಿಗೆ ಕಟ್ಟುವುದಾಗಿ ಮುಚ್ಚಳಿಕೆ ಬರೆದುಕೊಟ್ಟ ಬಳಿಕ ತೆರೆಯಲು ಅನುಮತಿಸಿದ್ದರು‌. ಗುರುವಾರ ಮತ್ತೆ ತೆರಿಗೆ ಸಂಗ್ರಹ ಅಭಿಯಾನದ ಭಾಗವಾಗಿ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಮಂತ್ರಿ ಮಾಲ್​ಗೆ ಬೀಗ ಹಾಕಿ, ಸ್ವಲ್ಪ ತೆರಿಗೆ ಪಾವತಿಸಿದ ಬಳಿಕ ತೆರೆಯಲು ಅವಕಾಶ ಕೊಟ್ಟರು.
Photo Courtesy: Google

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments