ಮಲೆನಾಡಿನಲ್ಲಿ ಹೈಟೆಕ್ ಗೋಮಾಂಸ ದಂಧೆ ಜಾಲ ಪತ್ತೆ

Webdunia
ಗುರುವಾರ, 20 ಸೆಪ್ಟಂಬರ್ 2018 (19:47 IST)
ಮಲೆನಾಡಿನಲ್ಲಿ ಹೈಟೆಕ್ ಗೋಮಾಂಸ ದಂಧೆ ಜಾಲ ಪತ್ತೆಯಾಗಿದೆ.

ಅಕ್ರಮವಾಗಿ ಗೋವುಗಳನ್ನ ಕಡಿದು ಮಾಂಸ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಣಜೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಶೆಡ್ ನಿರ್ಮಿಸಿ ಗೋಮಾಂಸವನ್ನು ದಂಧೆಕೋರರು ಮಾರಾಟ ಮಾಡುತ್ತಿದ್ದರು.

ದಾಳಿ ಸಂದರ್ಭದಲ್ಲಿ ಆರೋಪಿ ಇಮ್ರಾನ್ ಹಾಗೂ ಹ್ಯಾರಿಸ್ ಬಂಧನವಾಗಿದೆ. ಹತ್ತಾರು ಗುಂಡಿಗಳಲ್ಲಿ ಹಸುಗಳ ಕಾಲು,  ಚರ್ಮವನ್ನು ದಂಧೆಕೋರರು ಹೂತು ಇಟ್ಟಿದ್ದರು. ಕಾಣೆಯಾದ ಗೋವುಗಳನ್ನ  ಹುಡುಕಲು ಸ್ಥಳೀಯರು ಹೋದಾಗ ಗೋವುಗಳ ಅಸ್ಥಿ ಪತ್ತೆಯಾಗಿದೆ. ನೂರಾರು ಗೋವುಗಳ ತಲೆ, ಕಾಲುಗಳ ಅಸ್ಥಿ ಪತ್ತೆಯಾಗಿವೆ.

ರಾತ್ರೋರಾತ್ರಿ ಗೋವುಗಳನ್ನ ಕದ್ದಿಯುತ್ತಿದ್ದ ಹೈಟೆಕ್ ದಂಧೆಕೋರರು ಗೋಮಾಂಸ ದಂಧೆಯನ್ನು ಜಾಲವನ್ನಾಗಿ ಬೆಳೆಸಿದ್ದಾರೆ. ಈ ಕುರಿತು ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments