Webdunia - Bharat's app for daily news and videos

Install App

ದರ್ಶನ್ ಗಾಗಿ ಜೈಲು ಕೋಣೆ ತೊಳೆದು ರೆಡಿ ಮಾಡಿಕೊಂಡ ಸಿಬ್ಬಂದಿ

Krishnaveni K
ಬುಧವಾರ, 28 ಆಗಸ್ಟ್ 2024 (11:25 IST)
ಬಳ್ಳಾರಿ: ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಲಿರುವ ನಟ ದರ್ಶನ್ ಗಾಗಿ ಜೈಲು ಸಿಬ್ಬಂದಿ ಅವರು ಉಳಿಯಬೇಕಾದ ಕೋಣೆಯನ್ನು ತೊಳೆದು ಸ್ವಚ್ಛ ಮಾಡಿಟ್ಟುಕೊಂಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ರಾಜಾತಿಥ್ಯ ಪಡೆದ ಆರೋಪಕ್ಕೊಳಗಾಗಿದ್ದಾರೆ. ಈ ಕಾರಣಕ್ಕೆ ಕೋರ್ಟ್ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸಲು ಆದೇಶ ನೀಡಿದೆ. ಅದಕ್ಕೆ ಮೊದಲು ಅವರು ಇಂದು ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದಾರೆ.

ಇದಾದ ಬಳಿಕ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ. ಬಳ್ಳಾರಿ ಜೈಲಿಗೆ ದರ್ಶನ್ ಬರಲಿದ್ದಾರೆ ಎಂದು ಗೊತ್ತಾದ ಬೆನ್ನಲ್ಲೇ ಜೈಲು ಸಿಬ್ಬಂದಿ ಅವರು ಇರಬೇಕಾದ ಕೊಠಡಿಯನ್ನು ಸ್ವಚ್ಛಗೊಳಿಸಿಟ್ಟಿದ್ದಾರೆ. ದರ್ಶನ್ ಕೊಠಡಿಯನ್ನು ನಿನ್ನೆಯೇ ತೊಳೆದು ಸ್ವಚ್ಛಗೊಳಿಸಿದ್ದಾರೆ.

ದರ್ಶನ್ ಇರುವ ಕೊಠಡಿಯಲ್ಲಿ ಶೌಚಾಲಯ, ನೀರು ಸೌಲಭ್ಯ, ಸಿಸಿಟಿವಿ ನಿಗಾ, ಕೊಠಡಿಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ವಿಚಾರಣೆ ಎದುರಿಸಲು ಸೌಲಭ್ಯಗಳಿವೆ. ಈ ಜೈಲಿಗೆ ದರ್ಶನ್ ಈ ಹಿಂದೆ ಚೌಕ ಸಿನಿಮಾ ಶೂಟಿಂಗ್ ಗಾಗಿ ಬಂದಿದ್ದರು. ಇದೀಗ ಖೈದಿಯಾಗಿ ಬರುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments