Webdunia - Bharat's app for daily news and videos

Install App

Bengaluru Rains: ಬಾಬುಸಾಪಾಳ್ಯ ಕಟ್ಟಡ ಕುಸಿತ ಮಡಿದವರ ಸಂಖ್ಯೆ 5ಕ್ಕೆ ಏರಿಕೆ, ನಾಲ್ವರಿಗಾಗಿ ಶೋಧ (Video)

Krishnaveni K
ಬುಧವಾರ, 23 ಅಕ್ಟೋಬರ್ 2024 (10:46 IST)
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನ ಬಾಬೂಸಾಪಾಳ್ಯ ಬಳಿ ಸಂಭವಿಸಿದ ಕಟ್ಟಡ ಕುಸಿತದಲ್ಲಿ ಮಡಿದವರ ಸಂಖ್ಯೆ 5 ಕ್ಕೆ ಏರಿಕೆಯಾಗಿದ್ದು, ಇನ್ನೂ ನಾಲ್ವರ ಮೃತದೇಹಗಳಿಗಾಗಿ ಶೋಧ ಮುಂದುವರಿದಿದೆ.

ಕಟ್ಟದ ಕಾಮಗಾರಿ ನಡೆಯುತ್ತಿರುವಾಗಲೇ ಅನಾಹುತ ಸಂಭವಿಸಿದೆ. ಬಹುಮಹಡಿ ಕಟ್ಟಡವಿಡೀ ಕುಸಿದು ಬಿದ್ದಿದೆ. ಇದರಲ್ಲಿ ಸುಮಾರು 17 ನೌಕರರು ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಈಗಾಗಲೇ ಐವರ ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಇನ್ನೂ ನಾಲ್ವರ ಮೃತದೇಹ ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಗುತ್ತಿದೆ. ಓರ್ವನನ್ನು ಜೀವಂತವಾಗಿ ಹೊರತೆಗೆಯಲಾಗಿದ್ದು ಸದ್ಯಕ್ಕೆ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಬೀಡುಬಿಟ್ಟಿರುವ ಅಗ್ನಿ ಶಾಮಕ ದಳ ಸಿಬ್ಬಂದಿ ಹಿಟ್ಯಾಚಿ ಬಳಸಿ ಶೋಧ ಕಾರ್ಯ ನಡೆಸುತ್ತಿದೆ. ತುರ್ತು ಸೇವೆಗಾಗಿ ಆಂಬ್ಯುಲೆನ್ಸ್ ಕೂಡಾ ಸನ್ನದ್ಧವಾಗಿ ನಿಂತಿದೆ.

ಮೃತರಲ್ಲಿ ಯಾರೂ ಕರ್ನಾಟಕದವರಿಲ್ಲ. ಎಲ್ಲರೂ ಬಿಹಾರ, ಆಂಧ್ರ, ತಮಿಳುನಾಡು ಮೂಲದವರು ಎಂದು ಪೊಲೀಸರು ಹೇಳಿದ್ದಾರೆ. ಎಷ್ಟು ಜನ ಎಂದು ನಿಖರವಾಗಿ ಹೇಳಲು ಸಾಧ್ಯವಿಲ್ಲ ಎಂದೂ ಸ್ಥಳೀಯರು ಹೇಳುತ್ತಿದ್ದಾರೆ. ಅದೃಷ್ಟವಶಾತ್ ಖಾಲಿ ಜಾಗಕ್ಕೆ ಕಟ್ಟಡ ಕುಸಿದುಬಿದ್ದಿರುವುದರಿಂದ ಕೂದಲೆಳೆಯಲ್ಲೇ ಇರುವ ಅಕ್ಕಪಕ್ಕದ ಮನೆಗಳ ನಿವಾಸಿಗಳು ಬಚಾವ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments