ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

Krishnaveni K
ಶುಕ್ರವಾರ, 15 ಆಗಸ್ಟ್ 2025 (13:30 IST)
Photo Credit: X
ಬೆಂಗಳೂರು: 79 ನೇ ಸ್ವಾತಂತ್ರ್ಯೋತ್ಸವ ದಿನದಂದೇ ಬೆಂಗಳೂರಿನಲ್ಲಿ ಇಂದು ಮನೆಯೊಂದರಲ್ಲಿ ಅನುಮಾನಸ್ಪದ ಸ್ಪೋಟವಾಗಿದ್ದು, ಓರ್ವ ಬಾಲಕ ಸಾವನ್ನಪ್ಪಿ ಹಲವರಿಗೆ ಗಾಯಗಳಾಗಿವೆ.

ವಿಲ್ಸನ್ ಗಾರ್ಡನ್ ಬಳಿ ಚಿನ್ನಯ್ಯನ ಪಾಳ್ಯದ ಮನೆಯೊಂದರಲ್ಲಿ ಸ್ಪೋಟ ಸಂಭವಿಸಿದೆ. ಸ್ಪೋಟದ ತೀವ್ರತೆಗೆ ಪಕ್ಕದ ಮನೆಗಳಿಗೂ ಹಾನಿಯಾಗಿದೆ. ಘಟನೆಯಲ್ಲಿ ಓರ್ವ ಬಾಲಕ ಸಾವನ್ನಪ್ಪಿರುವುದು ಖಚಿತವಾಗಿದೆ. ಉಳಿದ ಕೆಲವರಿಗೆ ಗಾಯಗಳಾಗಿವೆ. ಸ್ಪೋಟಕ್ಕೆ ಕಾರಣವೇನೆಂದು ತನಿಖೆ ನಡೆಯುತ್ತಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ಸಿಲಿಂಡರ್ ಸ್ಪೋಟವೆನ್ನಲಾಗುತ್ತಿದೆ. ಆದರೆ ಇದರ ಹಿಂದೆ ಬೇರೆಯೇ ಸಾಧ್ಯತೆಗಳಿರಬಹುದೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಒಟ್ಟು 12 ಮಂದಿ ಗಾಯಗೊಂಡಿದ್ದು ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಸಂಜಯಗಾಂಧಿ ಆಸ್ಪತ್ರೆ ಮತ್ತು ಜಯನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

Video: ಜೋಡೆತ್ತು ಎಂದರೆ ಹೀಗಿರಬೇಕು.. ಜೊತೆಗಾರ ಎತ್ತು ಸತ್ತಿದ್ದಕ್ಕೆ ಜೋಡಿ ಎತ್ತು ಮಾಡಿದ್ದು ನೋಡಿದ್ರೆ ಕಣ್ಣೀರು ಬರುತ್ತೆ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಭಾರೀ ಮಳೆ

ಮುಂದಿನ ಸುದ್ದಿ
Show comments