Webdunia - Bharat's app for daily news and videos

Install App

ದೇವಸ್ಥಾನಗಳಲ್ಲಿ ಮಿತಿಗಿಂತ ಅಧಿಕ ಶಬ್ದ: ಪೊಲೀಸರಿಂದ ನೋಟಿ, ಕ್ರಮದ ಎಚ್ಚರಿಕೆ

Webdunia
ಬುಧವಾರ, 16 ಫೆಬ್ರವರಿ 2022 (20:51 IST)
ನಗರದ ಬಸವನಗುಡಿಯಲ್ಲಿರುವ ಶ್ರೀ ದೊಡ್ಡ ಗಣಪತಿ ದೇವಸ್ಥಾನ ಹಾಗೂ ಸಮೂಹ ದೇವಾಲಯಗಳಲ್ಲಿ ಡೆಸಿಬಲ್ ಗಿಂತ ಹೆಚ್ಚಿನ ಶಬ್ದ ಕೇಳಿಬರುತ್ತಿದೆ ಎಂದು ಬಸವನಗುಡಿ ಪೊಲೀಸ್ ಠಾಣೆಯಿಂದ ಈ ದೇವಸ್ಥಾನಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಸೂಚನೆಯ ಹೊರತಾಗಿಯೂ ಈ ದೇವಾಲಯಗಳಲ್ಲಿ ನಿಗದಿತ ಡೆಸಿಬಲ್ ಗಿಂತ ಹೆಚ್ಚಿನ ಶಬ್ದ ಕೇಳಿಬಂದಲ್ಲಿ  ಪ್ರಕರಣ ದಾಖಲಿಸುವ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ನೋಟಿಸ್‍ ಹಿನ್ನೆಲೆಯಲ್ಲಿ ದೊಡ್ಡ ಗಣಪತಿ ದೇವಸ್ಥಾನ ಹಾಗೂ ಸಮೂಹ ದೇವಾಲಯಗಳಲ್ಲಿ ಮಹಾಮಂಗಳಾರತಿ, ಅಭಿಷೇಕ ಇತ್ಯಾದಿ ಸಂದರ್ಭಗಳಲ್ಲಿ ಹಾಗೂ ದೇವಾಲಯದ ಆವರಣದಲ್ಲಿ ಉಪಯೋಗಿಸುವಂತಹ ಡಮರುಗ, ಧ್ವನಿವರ್ಧಕ ಯಂತ್ರಗಳಲ್ಲಿ ಮಿತಿಗಿಂತ ಹೆಚ್ಚಿನ ಶಬ್ದ ಉಂಟಾಗದಂತೆ ಕ್ರಮ ಕೈಗೊಳ್ಳಲು ದೊಡ್ಡ ಗಣಪತಿ ಸಮೂಹ ದೇವಸ್ಥಾನಗಳ ಕಾರ್ಯನಿರ್ವಹಣಾಧಿಕಾರಿಯು ದೇವಳದ ಸಿಬ್ಬಂದಿಗೆ ಸೂಚಿಸಿದ್ದಾರೆ.
ಸಮೂಹ ದೇವಸ್ಥಾನಗಳೆಂದರೆ ದೊಡ್ಡ ಗಣೇಶ ದೇವಸ್ಥಾನ, ಮಿಂಟೋ ಆಂಜನೇಯ ಸ್ವಾಮಿ ದೇವಸ್ಥಾನ, ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನ, ದೊಡ್ಡ ಬಸವಣ್ಣ ದೇವಸ್ಥಾನ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ಹಾಗೂ ಇನ್ನಿತರ ದೇವಸ್ಥಾನಗಳು ಇದರಡಿ ಬರಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments