Webdunia - Bharat's app for daily news and videos

Install App

Bengaluru Water price: ಕಳೆದ ವಾರ ಹಾಲಿನ ಬರೆ, ಈಗ ಬೆಂಗಳೂರಿಗೆ ನೀರಿನ ದರ ಏರಿಕೆ ಬರೆ: ಎಷ್ಟು ಹೆಚ್ಚಾಗಿದೆ ನೋಡಿ

Krishnaveni K
ಬುಧವಾರ, 9 ಏಪ್ರಿಲ್ 2025 (15:06 IST)
ಬೆಂಗಳೂರು: ಕರ್ನಾಟಕ ಬೆಲೆ ಏರಿಕೆಗಳ ಪಟ್ಟಿಗೆ ಈಗ ನೀರು ಕೂಡಾ ಅಧಿಕೃತವಾಗಿ ಸೇರ್ಪಡೆಯಾಗಿದೆ. ಕಳೆದ ವಾರ ಹಾಲಿನ ಬೆಲೆ ಏರಿಕೆ ಬರೆಯಾದರೆ ಈ ವಾರ ನೀರಿನ ಬರೆ ಸಿಕ್ಕಿದೆ.

ಬೆಂಗಳೂರಿನಲ್ಲಿ ನೀರಿನ ದರ ಏರಿಕೆಯಾಗಲಿದೆ ಎಂದು ಕಳೆದ ಹಲವು ದಿನಗಳಿಂದ ಸುದ್ದಿಯಿತ್ತು. ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಸದನದಲ್ಲೇ ಮಾಹಿತಿ ನೀಡಿದ್ದರು. ಹೀಗಾಗಿ ನೀರಿನ ದರ ಏರಿಕೆ ನಿರೀಕ್ಷಿತವಾಗಿತ್ತು.

ಆದರೆ ಹಾಲು, ವಿದ್ಯುತ್ ದರ ಏರಿಕೆ ಬಳಿಕ ಈಗ ನೀರಿನ ದರ ಏರಿಕೆಗೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ಈಗ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಮಾಹಿತಿ ನೀಡಿದ್ದಾರೆ. ಡೊಮೆಸ್ಟಿಕ್ ಕನೆಕ್ಷನ್ ಗೆ ಪ್ರತೀ ಲೀಟರ್ ಗೆ 1 ಪೈಸೆಯಷ್ಟು ಹೆಚ್ಚಳವಾಗಲಿದೆ ಎಂದು ಖಚಿತಪಡಿಸಿದ್ದಾರೆ.

ವಿವಿಧ ಸ್ಲ್ಯಾಬ್ ಗಳಲ್ಲಿ ನೀರಿನ ದರ ಏರಿಕೆ
-ಡೊಮೆಸ್ಟಿಕ್ ಕನೆಕ್ಷನ್ ಗೆ ಗರಿಷ್ಠ ಒಂದು ಲೀಟರ್ ಗೆ ಒಂದು ಪೈಸೆ ಹೆಚ್ಚಳವಾಗಲಿದೆ.
-8 ಸಾವಿರದವರೆಗಿನ ಸ್ಲ್ಯಾಬ್ ಗೆ 0.15 ಪೈಸೆ ಹೆಚ್ಚಳ.
-8-25 ಸಾವಿರ ಲೀಟರ್ ವರೆಗಿನ ಸ್ಲ್ಯಾಬ್ ಗೆ 0.40 ಪೈಸೆ ಹೆಚ್ಚಳ.
-25 ಸಾವಿರಕ್ಕಿಂತ ಹೆಚ್ಚಿನ ಲೀಟರ್ ಸ್ಲ್ಯಾಬ್ ಗೆ 0.80 ಪೈಸೆ ಹೆಚ್ಚಳ.
50-1 ಲಕ್ಷ ಲೀಟರ್ ವರೆಗಿನ ಸ್ಲ್ಯಾಬ್ ಗೆ 1 ಪೈಸೆ ಹೆಚ್ಚಳವಾಗಲಿದೆ.

 
ಈ ತಿಂಗಳಿನಿಂದಲೇ ದರ ಏರಿಕೆ ಅನ್ವಯವಾಗಲಿದೆ. ಇದರಿಂದಾಗಿ ನೀರು ಬಳಕೆದಾರರಿಗೆ ನೀರಿನ ದರ ಕನಿಷ್ಠ 20-30 ರೂ. ಹೆಚ್ಚುವರಿ ಪಾವತಿಸಬೇಕಾಗಬಹುದು.ಜಲಮಂಡಳಿ ಆರ್ಥಿಕ ಹೊರೆ ತಗ್ಗಿಸಲು ಬೆಲೆ ಏರಿಕೆ ಅನಿವಾರ್ಯ ಎಂದು ಜಲಮಂಡಳಿ ಅಧ್ಯಕ್ಷರು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments