Publish Date: Wed, 12 Oct 2022 (08:20 IST)
Updated Date: Wed, 12 Oct 2022 (08:24 IST)
ತುಮಕೂರು : ದೇಶವನ್ನು ಒಗ್ಗೂಡಿಸುವ ನೆಪದಲ್ಲಿ ಕಾಂಗ್ರೆಸ್ ಬಲವರ್ಧನೆಗಾಗಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆ ತುಮಕೂರು ಜಿಲ್ಲೆ ಹಾದು ಹೋಗುತಿದ್ದಂತೆ, ಕಾಂಗ್ರೆಸ್ ಚೋಡೋ ಕಾರ್ಯಕ್ರಮವೂ ಜೋರಾಗಿದೆ.
ಕಾಂಗ್ರೆಸ್ನ ಪ್ರಭಾವಿ ನಾಯಕ ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ತೊರೆದು ಬಿಜೆಪಿ ವೇದಿಕೆಯಲ್ಲಿ ಹೆಚ್ಚಿಗೆ ಕಾಣಿಸಿಕೊಂಡು ಕಾಂಗ್ರೆಸ್ಗೆ ಶಾಕ್ ಕೊಟ್ಟಿದ್ದಾರೆ.
ಮೂರು ದಿನಗಳ ಕಾಲ ಭಾರತ್ ಜೋಡೋ ಪಾದಯಾತ್ರೆ ತುಮಕೂರು ಜಿಲ್ಲೆಯಲ್ಲಿ ಸಂಚರಿಸಿ ಸೋಮವಾರ ಮಧ್ಯಾಹ್ನದ ವೇಳೆಗೆ ಚಿತ್ರದುರ್ಗ ಜಿಲ್ಲೆಗೆ ಪ್ರವೇಶಿಸಿತ್ತು.
ಆದರೆ ಇತ್ತ ತುಮಕೂರಿನಲ್ಲಿ ನಡೆದ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಮುದ್ದಹನುಮೇಗೌಡ ಭಾಗಿಯಾಗಿ ಸುರೇಶ್ ಗೌಡರ ಗುಣಗಾನ ಮಾಡುವುದರ ಜೊತೆಗೆ ಬಿಜೆಪಿಯನ್ನೂ ಹೊಗಳಿದರು.