Webdunia - Bharat's app for daily news and videos

Install App

ಮಹಿಳೆಯರ ಅಪಹರಣ ಕೇಸ್ ನಲ್ಲಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು

Krishnaveni K
ಮಂಗಳವಾರ, 18 ಜೂನ್ 2024 (11:01 IST)
ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣಗೆ ಈಗ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಭವಾನಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪ್ರಜ್ವಲ್ ರೇವಣ್ಣರಿಂದ ದೌರ್ಜನ್ಯಕ್ಕೊಳಗಾಗಿದ್ದ ಮಹಿಳೆಯನ್ನು ಎಚ್ ಡಿ ರೇವಣ್ಣ ದಂಪತಿಯ ನಿರ್ದೇಶನದ ಮೇರೆಗೆ ಭವಾನಿ ರೇವಣ್ಣ ಸಂಬಂಧಿಯೇ ಅಪಹರಣ ಮಾಡಿ ಕೂಡಿ ಹಾಕಿದ್ದರು ಎಂದು ಆರೋಪಿಸಲಾಗಿತ್ತು. ಪ್ರಕರಣ ಸಂಬಂಧ ಎಸ್ ಐಟಿ ಪಡೆ ಈಗಾಗಲೇ ರೇವಣ್ಣರನ್ನು ಬಂಧಿಸಿತ್ತು. ನ್ಯಾಯಾಂಗ ಬಂಧನದ ಬಳಿಕ ರೇವಣ್ಣ ಜಾಮೀನಿನ ಮೇಎಲೆ ಬಿಡುಗಡೆಯಾಗಿದ್ದರು.

ಇದರ ನಡುವೆಯೇ ಭವಾನಿ ರೇವಣ್ಣಗೂ ವಿಚಾರಣೆಗೆ ಹಾಜರಾಗಲು ಎಸ್ ಐಟಿ ನೋಟಿಸ್ ನೀಡಿತ್ತು. ಆದರೆ ಆರೋಗ್ಯದ ನೆಪ ನೀಡಿ ಅವರು ತಪ್ಪಿಸಿಕೊಂಡಿದ್ದರು. ಬಳಿಕ ಭವಾನಿ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಎಸ್ ಐಟಿ ತನಿಖೆ ವೇಳೆ ಭವಾನಿ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದಾರೆ.  ಹೀಗಾಗಿ ಅವರು ತನಿಖೆಗೆ ಸಹಕರಿಸುತ್ತಿದ್ದಾರೆ ಎಂದು ಭವಾನಿ ಪರ ವಕೀಲರು ವಾದ ಮಂಡಿಸಿದ್ದರು. ಈ ಹಿನ್ನಲೆಯಲ್ಲಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ರೇವಣ್ಣ ಈಗಾಗಲೇ ಜಾಮೀನಿನ ಮೇಲೆ ಹೊರಗಿದ್ದಾರೆ. ಅವರ ಪುತ್ರ ಪ್ರಜ್ವಲ್ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ