Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಹಿನ್ನೆಲೆಯಲ್ಲಿ ಈಗಾಗಲೇ ವಿಚಾರಣೆ ನಡೆಸುತ್ತಿರುವ ಸಿಐಡಿ ಹಲವರನ್ನು ಬಂಧನಕ್ಕೆ ಒಳಪಡಿಸಿದೆ. ಅಲ್ಲದೆ ತಲೆಮರೆಸಿಕೊಂಡಿರುವ ಕಲಬುರಗಿ ಜ್ಞಾನಜ್ಯೋತಿ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಬಂಧನಕ್ಕೆ ತೀವ್ರ ಪ್ರಯತ್ನ ನಡೆದಿದೆ. ಇದರ ಮಧ್ಯೆ ಬೆಂಗಳೂರಿನಲ್ಲಿ ಮಾತನಾಡಿರುವ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿ ಸಿಕ್ಕಿಬಿದ್ದಿರುವ ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ. ಈ ಅಭ್ಯರ್ಥಿಗಳು ಜೀವನ ಪರ್ಯಂತ ಪೊಲೀಸ್ ಪರೀಕ್ಷೆ ಬರೆಯದಂತೆ ಅನರ್ಹಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.