Webdunia - Bharat's app for daily news and videos

Install App

ಮಹಾಲಕ್ಷ್ಮಿ ಕೇಸ್ ಗೆ ಬಿಗ್ ಟ್ವಿಸ್ಟ್: ಆಕೆ ಪ್ಲ್ಯಾನ್ ಮಾಡಿದ್ದೇ ಬೇರೆ, ಆಗಿದ್ದೇ ಬೇರೆ

Krishnaveni K
ಶನಿವಾರ, 28 ಸೆಪ್ಟಂಬರ್ 2024 (09:34 IST)
ಬೆಂಗಳೂರು: ನೇಪಾಳಿ ಮೂಲದ ಮಹಿಳೆ ಮಹಾಲಕ್ಷ್ಮಿ ಮರ್ಡರ್ ಕೇಸ್ ಗೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ಮಹಾಲಕ್ಷ್ಮಿ ಪ್ಲ್ಯಾನ್ ಮಾಡಿದ್ದೇ ಬೇರೆ, ಆದರೆ ಆಗಿದ್ದೇ ಬೇರೆ ಎಂದು ವರದಿಗಳು ಹೇಳುತ್ತಿವೆ.

ಮಹಾಲಕ್ಷ್ಮಿ ಮೊದಲೇ ಮದುವೆಯಾಗಿದ್ದರೂ ಪ್ರೇಮಿ ಮುಕ್ತಿ ರಂಜನ್ ಪ್ರತಾಪ್ ರಾಯ್ ನಿಂದ ವಿಚಾರ ಮುಚ್ಚಿಟ್ಟಿದ್ದಳು. ಅಲ್ಲದೆ, ಬೇರೆಯವರ ಸಂಗ ಮಾಡಿದ್ದಳು. ಇದೆಲ್ಲಾ ತಿಳಿದು ಮುಕ್ತಿ ಆಕೆಯನ್ನು ತರಾಟೆಗೆ ತೆಗೆದುಕೊಂಡಿದ್ದ. ತನಗೆ ಕಿರಿ ಕಿರಿ ಮಾಡುತ್ತಿದ್ದ ಮುಕ್ತಿಯನ್ನು ಮುಗಿಸಲು ಆಕೆ ಪ್ಲ್ಯಾನ್ ಮಾಡಿದ್ದಳು ಎಂದು ಕೆಲವು ವರದಿಗಳು ಹೇಳುತ್ತಿವೆ.

ಮಹಾಲಕ್ಷ್ಮಿ ಹಂತ ಮುಕ್ತಿ ರಂಜನ್ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಸಾವಿಗೆ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದ. ಇದರಲ್ಲಿ ಮಹಾಲಕ್ಷ್ಮಿಯನ್ನು ಯಾಕೆ ಕೊಂದೆ ಎಂದು ವಿವರವಾಗಿ ಬರೆದಿದ್ದಾನೆ. ತನ್ನ ಬಳಿ ಮಹಾಲಕ್ಷ್ಮಿ ಹಣ ವಸೂಲಿ ಮಾಡಿದ್ದಳು. ಆದರೆ ಮದುವೆ ವಿಚಾರವನ್ನು ಮುಚ್ಚಿಟ್ಟಿದ್ದಳು. ಈ ವಿಚಾರವಾಗಿ ತಮ್ಮಿಬ್ಬರ ನಡುವೆ ಗಲಾಟೆಯಾಗಿತ್ತು.

ಮೊದಲು ಆಕೆ ತನ್ನನ್ನೇ ಕೊಲೆ ಮಾಡಲು ಮುಂದಾಗಿದ್ದಳು. ಇದಕ್ಕೇ ಆಕೆಯನ್ನೇ ಕೊಲೆ ಮಾಡಿದೆ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾನೆ ಎನ್ನಲಾಗಿದೆ. ಮಹಾಲಕ್ಷ್ಮಿ ನನ್ನ ಮಗನ ಬಳಿ ಚಿನ್ನದ ಉಂಗುರ, ಸರ ಪೀಕಿದ್ದಳು ಎಂಬ ಸಂಗತಿಯನ್ನು ಆತನ ತಾಯಿ ದೂರಿದ್ದಾರೆ. ಮಹಾಲಕ್ಷ್ಮಿ ಕೊಲೆಗೆ ಮುನ್ನ ತನ್ನ ಮೇಲೆ ಹಲ್ಲೆ ನಡೆಸಿದ್ದಳು ಎಂಬುದನ್ನು ಮುಕ್ತಿ ಡೆತ್ ನೋಟ್ ನಲ್ಲಿ ಬರೆದುಕೊಂಡಿದ್ದ. ಹೀಗಾಗಿ ಆಕೆಯ ಉದ್ದೇಶವೂ ಅದೇ ಆಗಿತ್ತು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments