ತಂತ್ರಜ್ಞಾನ ನೀತಿ ಅಳವಡಿಕೆಯಿಂದ ಜೈವಿಕ ತಂತ್ರಜ್ಞಾನ ಕ್ಞೇತ್ರ ಅಭಿವೃದ್ಧಿ: ಪ್ರಿಯಾಂಕ್ ಖರ್ಗೆ

Webdunia
ಭಾನುವಾರ, 30 ಜುಲೈ 2023 (06:04 IST)
ಬೆಂಗಳೂರು : ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯು ಜೈವಿಕ ತಂತ್ರಜ್ಞಾನ ನೀತಿಯನ್ನು ಅಳವಡಿಸಿಕೊಂಡಿದ್ದು, ಈಗ ಮುಂದುವರೆದ ತಂತ್ರಜ್ಞಾನವಾಗಿ ಅಭಿವೃದ್ಧಿಗೊಂಡಿರುವ ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಮೂಲಕ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಸಾಧಿಸುವಲ್ಲಿ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.

ಜೈವಿಕ ಬದಾಲಾವಣೆಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸುವ ಸಾಧ್ಯತೆಗಳ ಬಗ್ಗೆ ಸೆಂಟರ್ ಆಫ್ ಎಕ್ಸಲೆನ್ಸ್ ನೆರವನ್ನು ಪಡೆಯಲಾಗುವುದು ಎಂದು ಹೇಳಿದ ಸಚಿವರು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಾದ ಅವಶ್ಯಕತೆಯಿದೆ ಎಂದರು.

ನಗರದ ರಾಡಿಸನ್ ಬ್ಲೂ ಏಟ್ರಿಯಾ ಹೋಟೆಲಿನಲ್ಲಿ ಏಟ್ರಿಯಾ ವಿಶ್ವವಿದ್ಯಾಲಯದ ಉತ್ಕೃಷ್ಟತೆಯ ಕೇಂದ್ರ ಮತ್ತು ಸ್ವಿಸ್ನೆಕ್ಸ್ ಸಂಸ್ಥೆಯ ಸಹಯೋಗದಲ್ಲಿ ನಡೆದ ಜೀವವೈವಿಧ್ಯ ರಕ್ಷಣೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುವ ನಿರೀಕ್ಷೆ ಇರುವ ಡಿಜಿಟಲ್ ತಂತ್ರಜ್ಞಾನದ ಮೂಲಕ ಜೀವ ವೈವಿಧ್ಯ ಸಂರಕ್ಷಣೆಗಾಗಿ ರೂಪಿಸಲಾಗಿರುವ ಜಾಗತಿಕ ಮುಕ್ತ ವೇದಿಕೆಯ ಮೊದಲ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡುತ್ತಿದ್ದರು. 

ವಿಶ್ವದಲ್ಲಿ ಇಂದಿನ ಪರಿಸರ ಅವನತಿಯನ್ನು ಎದುರಿಸಲು ಶಿಕ್ಷಣ, ಉದ್ಯಮ ಮತ್ತು ಸಂರಕ್ಷಣೆಯ ಮಧ್ಯಸ್ಥಗಾರರನ್ನು ಏಕೀಕೃತವಾಗಿ ಒಳಪಡಿಸುವ ನಿರ್ಣಾಯಕ ಅಗತ್ಯವಿದೆ ಎಂದು ಪ್ರಿಯಾಂಕ್ ಖರ್ಗೆ ಒತ್ತಿ ಹೇಳಿದರು. ಸುಸ್ಥಿರ ಬೆಳವಣಿಗೆ ಮತ್ತು ವನ್ಯಜೀವಿ ಸಂರಕ್ಷಣೆಗಾಗಿ ತಂತ್ರಜ್ಞಾನ-ಚಾಲಿತ ಪರಿಹಾರಗಳನ್ನು ರೂಪಿಸುವಲ್ಲಿ ದೇಶದ ಐಟಿ ರಾಜಧಾನಿಯಾದ ಬೆಂಗಳೂರು ಮತ್ತು ಕರ್ನಾಟಕ ಮುಂದಾಳತ್ವ ವಹಿಸಬೇಕಾದ ಅವಶ್ಯಕತೆಯಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments