ಬಿಜೆಪಿಗೆ ಕೈ ಕೊಟ್ಟು ಎಎಪಿ ಸೇರಲಿದ್ದಾರಾ ಕಮಲ ಶಾಸಕ....!!!

Webdunia
ಶುಕ್ರವಾರ, 9 ಜುಲೈ 2021 (18:24 IST)
ಬೆಂಗಳೂರು: ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಬಿಜೆಪಿ ಶಾಸಕರೊಬ್ಬರು ಆಮ್ ಆದ್ಮಿ ಪಕ್ಷ ಸೇರುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಯಾವ ಶಾಸಕ ಎಂಬುದನ್ನು ಎಎಪಿ ಬಹಿರಂಗಪಡಿಸಿಲ್ಲ.
 
ಈ ಕುರಿತು ಮಾಧ್ಯಮ ಹೇಳಿಕೆಯನ್ನೂ ಬಿಡುಗಡೆ ಮಾಡಿರುವ ಆಮ್ ಆದ್ಮಿ ಪಕ್ಷ, ಬಿಜೆಪಿ ಶಾಸಕ ಪಕ್ಷ ಸೇರುತ್ತಿರುವ ಕುರಿತು ತಿಳಿಸಿದೆ. ಮಧ್ಯಾಹ್ನ 12 ಗಂಟೆಗೆ ಪ್ರೆಸ್ ಕ್ಲಬ್ ನಲ್ಲಿ ನಡೆಯಲಿರುವ ಆಮ್ ಆದ್ಮಿ ಪಕ್ಷದ ಸುದ್ದಿಗೋಷ್ಠಿ ಕುತೂಹಲ ಮೂಡಿಸಿದೆ. ಎಎಪಿ ಸೇರ್ಪಡೆಯಾಗಲಿರುವ ಬಿಜೆಪಿ ಶಾಸಕ ಯಾರೆಂದು ಹೇಳುತ್ತೇವೆ. ಈಗಾಗಲೇ ಅವರ ಜೊತೆ ಮಾತುಕತೆ ನಡೆದಿದೆ. ಶಾಸಕ ಯಾರು ಎಂಬ ಕುತೂಹಲಕ್ಕೆ ನಾಳೆ ಉತ್ತರ ಸಿಗಲಿದೆ ಎಂದು ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್.ವಿ.ಸದಂ ಮಾಹಿತಿ ನೀಡಿದ್ದಾರೆ.
 
ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿ ಪಕ್ಷದ ಆಂತರಿಕ ಒಳ ಜಗಳಗಳು, ಸ್ವ ಹಿತಾಸಕ್ತಿಯ ರಾಜಕಾರಣ, ಸಾಂವಿಧಾನಿಕ ಅಧಿಕಾರ ದುರ್ಬಳಕೆ, ಕುಟುಂಬ ಭ್ರಷ್ಟಾಚಾರ ಇವೆಲ್ಲವುಗಳಿಂದ ಬೇಸತ್ತಿರುವ ಬಿಜೆಪಿ ಶಾಸಕರು, ದೇಶದ ಪ್ರಸ್ತುತ ಏಕೈಕ ಆಶಾಕಿರಣವಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪಾರದರ್ಶಕ, ಪ್ರಾಮಾಣಿಕ, ಭ್ರಷ್ಟಮುಕ್ತ ಆಡಳಿತವನ್ನು ಮೆಚ್ಚಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದು ಕರ್ನಾಟಕ ರಾಜಕೀಯದಲ್ಲಿ ಒಂದು ಮಹತ್ವದ ಬೆಳವಣಿಗೆಯಾಗಿದೆ ಎಂದಿದ್ದಾರೆ.
 
ಪರ್ಯಾಯ ರಾಜಕಾರಣದ ನಮ್ಮ ಪ್ರಯತ್ನದಲ್ಲಿ ಈ ಬೆಳವಣಿಗೆ ಸಂತಸದ ವಿಷಯವಾಗಿದೆ. ಈ ಮಹತ್ವದ ಕಾರ್ಯಕ್ರಮವು ಜುಲೈ 9, ಶುಕ್ರವಾರದಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಪ್ರೆಸ್ ಕ್ಲಬ್‍ನಲ್ಲಿ  ಜರುಗಲಿದೆ .ಆಮ್ ಆದ್ಮಿ  ಪಾರ್ಟಿ ಕರ್ನಾಟಕದ ಉಸ್ತುವಾರಿ ರೋಮಿ ಭಾಟಿ     ಹಾಗೂ  ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿಯವರ ಸಮ್ಮುಖದಲ್ಲಿ ಈ ಕಾರ್ಯಕ್ರಮವು ನಡೆಯಲಿದೆ.
 
ಅಕ್ರಮ ಕಲ್ಲು ಗಣಿಗಾರಿಕೆ ರೂವಾರಿ ಎಚ್‍ಡಿಕೆ
ಅಕ್ರಮ ಕಲ್ಲು ಗಣಿಗಾರಿಕೆಗೆ ಎಚ್.ಡಿ.ಕುಮಾರಸ್ವಾಮಿಯೇ ಪ್ರಮುಖ ರೂವಾರಿ. ಹಳೆ ಮೈಸೂರು ಭಾಗದ ವಿವಿಧೆಡೆ ಎಚ್‍ಡಿಕೆ ಹಾಗೂ ಅವರ ಆಪ್ತರಿಂದ ಭಾರೀ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆ ನಡೆದಿದೆ. ರಾಜ್ಯ ಬಿಜೆಪಿ ಸರ್ಕಾರ ಇದಕ್ಕೆ ಬೆಂಬಲವಾಗಿ ನಿಂತಿದೆ ಎಂದು ಜಗದೀಶ್ ವಿ. ಸದಂ ಮಾತನಾಡಿ ಆರೋಪಿಸಿದ್ದಾರೆ.
 
ಅಕ್ರಮ ಕಲ್ಲು ಗಣಿಗಾರಿಕೆ ರೂವಾರಿ ಎಚ್‍ಡಿಕೆ
 
 
ಕೆಆರ್‍ಎಸ್ ನಿರ್ಮಾಣದ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್.ಎಂ.ವಿಶ್ವೇಶ್ವರಯ್ಯ ಮುಂತಾದ ಮಹನೀಯರ ಶ್ರಮವಿದೆ. ಕೆಆರ್‍ಎಸ್ ಸಮೀಪ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ ಅಣೆಕಟ್ಟೆ ಒಡೆದು ಹೋದರೆ ಭಾರೀ ಅನಾಹುತ ಸಂಭವಿಸಲಿದೆ. ಅಕ್ರಮದ ವಿರುದ್ಧ ಧ್ವನಿ ಎತ್ತಿರುವ ಸುಮಲತಾ ವಿರುದ್ಧ ಎಚ್‍ಡಿಕೆ ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ನಾಚಿಕೆಗೇಡು. ಕೆಆರ್‍ಎಸ್‍ನಿಂದ ಕೇವಲ 10 ಕಿ.ಮೀ. ದೂರದಲ್ಲಿರುವ ಬೇಬಿ ಬೆಟ್ಟದಲ್ಲಿ ಸದ್ಯ 80ಕ್ಕೂ ಹೆಚ್ಚು ಕ್ರಷರ್ ಗಳಿವೆ. ಈ ಪೈಕಿ 50 ಕ್ರಷರ್ ಅನಧಿಕೃತ ಎಂದು ಆರೋಪಿಸಿದ್ದಾರೆ.
 
ಹಂಗರಹಳ್ಳಿಯಿಂದ ಪ್ರತಿದಿನ 500ಕ್ಕೂ ಹೆಚ್ಚು ಲಾರಿಗಳಲ್ಲಿ ಕಲ್ಲುಗಳು ಹೋಗುತ್ತಿವೆ. ಅಕ್ರಮದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್‍ನ ಅನೇಕ ಮುಖಂಡರು ಶಾಮೀಲಾಗಿದ್ದಾರೆ. ದಂಧೆಯ ಪ್ರಮುಖ ರೂವಾರಿಯಾಗಿ ಎಚ್.ಡಿ.ಕುಮಾರಸ್ವಾಮಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಎಚ್ ಡಿಕೆಗೆ ಸಹಾಯಕರಾಗಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಪುಟ್ಟರಾಜು ಇದ್ದಾರೆ. ಇವರೆಲ್ಲರಿಗೂ ಸಪೋರ್ಟ್ ಮಾಡುತ್ತಿರುವ ಸಿಎಂ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments