Webdunia - Bharat's app for daily news and videos

Install App

ಅನ್ಯಧರ್ಮೀಯರಿಗೆ ಧಾರ್ಮಿಕ ಸ್ವಾತಂತ್ರ್ಯ, ಹಿಂದೂಗಳಾದರೆ ಅರೆಸ್ಟ್ ಮಾಡಿಸುವ ಸಿದ್ದರಾಮಯ್ಯ: ಬಿಜೆಪಿ ಆರೋಪ

Krishnaveni K
ಸೋಮವಾರ, 16 ಸೆಪ್ಟಂಬರ್ 2024 (13:13 IST)
ಬೆಂಗಳೂರು: ಅನ್ಯಧರ್ಮೀಯರು ಏನೇ ಮಾಡಿದರೂ ಅದನ್ನು ಧಾರ್ಮಿಕ ಸ್ವಾತಂತ್ರ್ಯ ಎನ್ನುವ ಸಿದ್ದರಾಮಯ್ಯ ಅದೇ ಕೆಲಸವನ್ನು ಹಿಂದೂಗಳು ಮಾಡಿದರೆ ಪೊಲೀಸರ ಮೂಲಕ ಅರೆಸ್ಟ್ ಮಾಡಿಸಿ ದೌರ್ಜನ್ಯವೆಸಗುತ್ತಾರೆ ಎಂದು ಕರ್ನಾಟಕ ಬಿಜೆಪಿ ಆರೋಪಿಸಿದೆ.

ಮಂಡ್ಯದ ನಾಗಮಂಗಲದಲ್ಲಿ ನಡೆದ ಕೋಮುಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಈಗ ರಾಜ್ಯ ಬಿಜೆಪಿ ಘಟಕ ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದೆ. ನಿನ್ನೆ ರಾತ್ರೋರಾತ್ರಿ ಪಾಂಡವಪುರದ ಆರ್ ಎಸ್ಎಸ್ ಕಾರ್ಯಕರ್ತರ ಮನೆಗೆ ನುಗ್ಗಿ ಅರೆಸ್ಟ್ ಮಾಡಿರುವುದಕ್ಕೆ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಅನ್ಯಧರ್ಮೀಯರು ಧಾರ್ಮಿಕ ಸ್ವಾತಂತ್ರ್ಯದ ಹೆಸರಿನಲ್ಲಿ ಯಥೇಚ್ಛವಾಗಿ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡಿದರೂ ಸುಮ್ಮನೆ ಬಾಯಿ ಮುಚ್ಚಿಕೊಳ್ಳುವ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ, ಹಿಂದೂಗಳು ಶಾಂತಿಯುತ ಪ್ರತಿಭಟನೆ ಮಾಡಲು ಮುಂದಾದರೆ ದೇವರನ್ನೇ ಬಂಧಿಸುವಷ್ಟರ ಮಟ್ಟಿಗೆ ದರ್ಪ ಮೆರೆಯುತ್ತಿದೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ದರ್ಪ ಕೆಲವೇ ದಿನಗಳಲ್ಲಿ ಅಂತ್ಯವಾಗುವ ಕಾಲ ಬಂದಿದೆ’ ಎಂದಿದೆ.

ಅನ್ಯಧರ್ಮೀಯರು ಏನೇ ಮಾಡಿದರೂ ಅದನ್ನು ಸಿದ್ದರಾಮಯ್ಯ ಅದು ಅವರ ಧಾರ್ಮಿಕ ಸ್ವಾಂತ್ರ್ಯ ಕಣ್ರೀ ಎಂದು ಸಮರ್ಥಿಸುತ್ತಾರೆ. ಆದರೆ ಹಿಂದೂಗಳು ಮಾಡಿದರೆ ಇದು ಕಾನೂನು ಉಲ್ಲಂಘನೆ ಅರೆಸ್ಟ್ ಮಾಡ್ರೀ ಎಂದು ಆದೇಶ ಕೊಡುತ್ತಾರೆ ಎಂದು ಬಿಜೆಪಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments