Webdunia - Bharat's app for daily news and videos

Install App

ಪರಿವರ್ತನಾ ಯಾತ್ರೆಗೆ ಕ್ಷಣಗಣನೆ: ಬಿಐಇಸಿ ಮೈದಾನದಲ್ಲಿ ಸಕಲ ಸಿದ್ಧತೆ

Webdunia
ಗುರುವಾರ, 2 ನವೆಂಬರ್ 2017 (11:09 IST)
ಬೆಂಗಳೂರು: ಬಿಜೆಪಿಯ ಮಹಾತ್ವಾಕಾಂಕ್ಷಿ ಪರಿವರ್ತನಾ ಯಾತ್ರೆ ಆರಂಭಕ್ಕೆ ನೆಲಮಂಗಲ ಮಾದವಾರ ಬಿಐಇಸಿ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

17 ಜಿಲ್ಲೆಗಳ 27 ಸಾವಿರ ಬೂತ್ ಗಳಿಂದ ಬೈಕ್ ಮೂಲಕ ಕಾರ್ಯಕರ್ತರು ಆಗಮಿಸಲಿದ್ದಾರೆ. 11.30ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಆಗಮಿಸಲಿದ್ದು, ಮಾಜಿ ಡಿಸಿಎಂ ಆರ್. ಅಶೋಕ್ ಗೆ ಸಮಾವೇಶದ ಜವಾಬ್ದಾರಿ ವಹಿಸಲಾಗಿದೆ.

75 ದಿನ ನಡೆಯಲಿರುವ ರಥಯಾತ್ರೆ ವೇದಿಕೆ ಮೇಲೆ 90 ನಾಯಕರಿಗೆ ಅವಕಾಶ ಕಲ್ಪಿಸಲಾಗಿದ್ದು, ಮೊದಲ ಸಾಲಿನಲ್ಲಿ ಪ್ರಮುಖ 30 ನಾಯಕರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಸುಮಾರು 30 ಸಾವಿರ ಕಾರ್ಯಕರ್ತರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕೇಂದ್ರ ವಲಯ ಐಜಿಪಿ ಅಮೃತ್ ಪಾಲ್ ನೇತೃತ್ವದಲ್ಲಿ ಭಾರೀ ಭದ್ರತೆ ಒದಗಿಸಿದೆ. 4 ಎಸ್ಪಿ, 4 ಎಎಸ್ಪಿ, 14 ಡಿವೈಎಸ್ಪಿ, 31 ಸಿಪಿಐ, 61 ಪಿಎಸ್ಐ, 135 ಎಎಸ್ಐ, 6 ಕೆಎಸ್ ಆರ್ ಪಿ, 8 ಡಿಎಆರ್ ತುಕಡಿ ನಿಯೋಜನೆ, ಮೈದಾನದಲ್ಲಿ 30ಕ್ಕೂ ಹೆಚ್ಚು ಸಿಸಿ ಕ್ಯಾಮರಗಳ ಅಳಡವಳಿಕೆ ಮಾಡಲಾಗಿದೆ. ಒಟ್ಟು 15 ಸಾವಿರಕ್ಕೂ ಹೆಚ್ಚು ಜನ ಪೊಲೀಸರ ನಿಯೋಜನೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಲಕ್ಷಕ್ಕೂ ಹೆಚ್ಚು ಬೈಕ್ ಹಾಗೂ ನಾಲ್ಕು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ.

ಇನ್ನು ನವ ಕರ್ನಾಟಕದ ನಿರ್ಮಾಣಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ 224 ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ಸಂಚಾರ ಮಾಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments