ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ

Webdunia
ಸೋಮವಾರ, 19 ಸೆಪ್ಟಂಬರ್ 2022 (16:48 IST)

ಸೋಮವಾರ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಈಶ್ವರಪ್ಪ ಅವರ ಮೇಲೆ ನೇರ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಬಿ ರಿಪೋರ್ಟ್‌ ಸಲ್ಲಿಸಿದ್ದರು. ಪೊಲೀಸರ ವರದಿಯಲ್ಲಿ ಕ್ಲೀನ್‌ ಚಿಟ್‌ ನೀಡಲಾಗಿರುವುದರಿಂದ ತನ್ನನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎನ್ನುವುದು ಈಶ್ವರಪ್ಪ ಅವರ ಆಗ್ರಹವಾಗಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಾಗಲೀ, ಹೈಕಮಾಂಡ್‌ ಆಗಲೀ ಇದರ ಬಗ್ಗೆ ಯಾವುದೇ ಚಿಂತನೆ ನಡೆಸುತ್ತಿರುವುದು ಅವರನ್ನು ಕೆರಳಿಸಿದೆ.

ಈಶ್ವರಪ್ಪ ಅವರು ಕಳೆದ ಸೆಪ್ಟೆಂಬರ್‌ ೧೨ರಿಂದ ಆರಂಭವಾದ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿಲ್ಲ. ಅದಕ್ಕಿಂತ ಮೊದಲು ಸೆಪ್ಟೆಂಬರ್‌ ೧೦ರಂದು ದೇವನಹಳ್ಳಿಯಲ್ಲಿ ನಡೆದ ಬಿಜೆಪಿ ಸರಕಾರದ ಜನಸ್ಪಂದನ ಸಮಾವೇಶಕ್ಕೂ ಅವರು ಬಂದಿರಲಿಲ್ಲ. ಹೀಗೆ ಪಕ್ಷ ಮತ್ತು ಸರಕಾರದ ವಲಯದ ಯಾವ ಕಾರ್ಯಕ್ರಮದಲ್ಲೂ ಭಾಗವಹಿಸದಿರುವ ಮೂಲಕ ಅವರು ತಮ್ಮ ಅತೃಪ್ತಿಯನ್ನು ನೇರವಾಗಿ ತೋರಿಸಿದ್ದಾರೆ. ಈ ನಡುವೆ, ಸೆ. ೯ರಂದು ನಡೆದ ಶಿವಮೊಗ್ಗದ ಗಣೇಶೋತ್ಸವ ಮೆರವಣಿಗೆಯಲ್ಲಿ ಹಗಲು ರಾತ್ರಿ ಓಡಾಡಿದ ಕಾರಣ ಕಾಲು ನೋವಾಗಿದೆ ಎಂಬ ಕಾರಣಕ್ಕೆ ಜನಸ್ಪಂದನ ಮತ್ತು ಅಧಿವೇಶನದ ಆರಂಭದ ದಿನಗಳಲ್ಲಿ ಹಾಜರಾಗಿರಲಿಲ್ಲ ಎಂದು ಹೇಳಲಾಗಿತ್ತು. ಆದರೆ, ಈಗ ಅವರೇ ತಮ್ಮ ಗೈರುಹಾಜರಿಯ ಕಾರಣ ತೆರೆದಿಟ್ಟಿದ್ದಾರೆ.

ʻʻಇದರಲ್ಲಿ ಮುಚ್ಚುಮರೆ ಏನೂ ಇಲ್ಲ. ನನಗೆ ಅಸಮಧಾನ ಇದೆ, ಅದಕ್ಕೆ ಸದನಕ್ಕೆ ಹೋಗ್ತಿಲ್ಲʼʼ ಎಂದು ಹೇಳಿದರು. ʻʻಮಂತ್ರಿ ಆಗಿಯೇ ಸದನಕ್ಕೆ ಹೋಗೋದು ಅಂತ ತೀರ್ಮಾನ ಮಾಡಿದ್ದೀರಾ?ʼʼ ಎಂದು ಕೇಳಿದಾಗ, ʻʻಅದರ ಬಗ್ಗೆ ಚರ್ಚೆ ಬೇಡʼʼ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಶೆಖೆಯಾಗುತ್ತದೆಂದು ಟೆರೇಸ್ ಮಲಗುವವರು ಈ ವಿಡಿಯೋ ತಪ್ಪದೇ ನೋಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜನರು ಕ್ಷಮಿಸುವುದಿಲ್ಲ: ಗೋವಿಂದ ಕಾರಜೋಳ

ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಬುರಗಿ ಲಾಸ್ಟ್ ಬರೋದು ಯಾಕೆ

ಆನ್‌ಲೈನ್‌ ಗೇಮ್ ದಾಸನಾದ ಮಗನಿಂದ ಮೊಬೈಲ್ ಕಿತ್ತುಕೊಂಡಿದ್ದೆ ತಪ್ಪಾಯಿತು

ಮುಂದಿನ ಸುದ್ದಿ
Show comments