Publish Date: Fri, 19 Mar 2021 (11:10 IST)
Updated Date: Fri, 19 Mar 2021 (11:11 IST)
ಬೆಂಗಳೂರು: ಸಿಡಿ ಪ್ರಕರಣದಿಂದಾಗಿ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನ ಕಳೆದುಕೊಂಡರು. ಇದೀಗ ಪಕ್ಷದಿಂದ ಮತ್ತೊಂದು ಶಾಕ್ ಸಿಕ್ಕಿದೆ.
ರಮೇಶ್ ಜಾರಕಿಹೊಳಿಗೆ ಬೆಳಗಾವಿ ಉಪಚುನಾವಣೆ ಉಸ್ತುವಾರಿ ನೀಡಲಾಗಿತ್ತು. ಆದರೆ ಈಗ ಸಿಡಿ ಪ್ರಕರಣದಿಂದಾಗಿ ವಿವಾದಕ್ಕೆ ಗುರಿಯಾಗಿರುವ ಕಾರಣ ರಮೇಶ್ ಜಾರಕಿಹೊಳಿಯನ್ನು ಉಸ್ತುವಾರಿ ಸ್ಥಾನದಿಂದ ಕೊಕ್ ನೀಡಲಾಗಿದೆ.
ಸುರೇಶ್ ಅಂಗಡಿ ನಿಧನದ ಬಳಿಕ ಆ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಇಲ್ಲಿ ಬಿಜೆಪಿ ಗೆಲುವಿನ ಹೊಣೆ ರಮೇಶ್ ಜಾರಕಿಹೊಳಿಗೆ ನೀಡಲಾಗಿತ್ತು. ಆದರೆ ಈಗ ಅವರನ್ನು ಕೈಬಿಡಲಾಗಿದ್ದು, ಮತ್ತೊಬ್ಬ ನಾಯಕರಿಗೆ ಸದ್ಯದಲ್ಲೇ ಬಿಜೆಪಿ ಚುನಾವಣೆ ಉಸ್ತುವಾರಿ ನೀಡಲಾಗುತ್ತದೆ.