Webdunia - Bharat's app for daily news and videos

Install App

ಬಜೆಟ್ ಮಂಡನೆಯಾದ್ರು ಬಿಜೆಪಿಗೆ ಸಿಗ್ತಿಲ್ಲ ಸಾರಥಿ...!

Webdunia
ಸೋಮವಾರ, 10 ಜುಲೈ 2023 (18:40 IST)
ವಿಪಕ್ಷ ನಾಯಕನ ಆಯ್ಕೆ ಇಂದು ಆಗುತ್ತೆ, ರಾತ್ರಿ ಆಗುತ್ತೆ, ಆಗೇ ಬಿಡ್ತು ಎಂಬ ರೆಡಿಮೇಡ್ ಡೈಲಾಗ್ ಗಳನ್ನ ಕೇಳಿ-ಕೇಳಿ ಸಾಕಾಗೋಗಿದೆ. ಅವರು ಕೊಡ್ತಿಲ್ಲ, ಇವರು ಬಿಡ್ತಿಲ್ಲ ಎಂಬಂತಾಗೋಗಿದೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ. ಕಳೆದ 10 ದಿನಗಳಿಂದ ವಿಪಕ್ಷ ನಾಯಕನ‌ ಆಯ್ಕೆ ಸರ್ಕಸ್ ಬಿಜೆಪಿ ನಡೆಯುತ್ತಲೇ ಇದ್ದು 3 ಬಣಗಳ ನಡುವೆ ಇನ್ನು ಒಮ್ಮತ ಮೂಡದ ಕಾರಣ ಆಯ್ಕೆ ಇನ್ನು ಕಗ್ಗಂಟಾಗೆ ಉಳಿದಿದೆ. ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದು ಆಯ್ತು, ನಾಳೆ ಇಂದ ಬಜೆಟ್ ಮೇಲಿನ ಚರ್ಚೆ ಆರಂಭವಾಗ್ತಿದ್ದು , ಸದನದಲ್ಲಿ ಆಡಳಿತ ಪಕ್ಷದ ಮೇಲೆ ಮುಗಿಬೀಳ್ಬೇಕಾದ ವಿಪಕ್ಷದ ಸಾರಥಿಯೇ ಇಲ್ಲದೆ ಬಜೆಟ್ ಮೇಲಿನ ಚರ್ಚೆ ಆರಂಭವಾಗ್ತಿರೋದೇ ದುರಂತ.ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರೆಬಲ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಸುನೀಲ್ ಕುಮಾರ್ ಮಧ್ಯೆ ವಿಪಕ್ಷ ನಾಯಕನ ಸ್ಥಾನಕ್ಕೆ ಟಫ್ ಫೈಟ್ ನಡೆಯುತ್ತಿದ್ದು. ಕಳೆದ 4 ದಿನಗಳ ಹಿಂದೆ ನಡೆದ ವೀಕ್ಷಕರ ಅಭಿಪ್ರಾಯ ಸಂಗ್ರಹದಲ್ಲು ಮೂವರ ಪರ- ವಿರೋಧ ಮತಗಳು ಚಲಾವಣೆಯಾಗಿವೆ. ಮಾಜಿ ಸಿಎಂ ಬೊಮ್ಮಾಯಿಯನ್ನ ‌ಆಯ್ಕೆ ಮಾಡಲು ಬಿಲ್  ಸಂತೋಷ್ ಒಪ್ತಿಲ್ಲ, ಯತ್ನಾಳ್ ಆಯ್ಕೆಗೆ ಯಡಿಯೂರಪ್ಪ ಒಪ್ತಿಲ್ಲ. ಸುನೀಲ್ ಕುಮಾರ್ ಆಯ್ಕೆ ಮಾಡಲು ಬಿಎಸ್ವೈ, ಸಂತೋಷ್ ಇಬ್ಬರಿಗೂ ಒಪ್ತಿಲ್ಲ ಎನ್ನುವಂತಾಗಿದೆ ಬಿಜೆಪಿ ಪರಿಸ್ಥಿತಿ. ಸದ್ಯ ವಿಪಕ್ಷ ನಾಯಕನ ಆಯ್ಕೆ ಚೆಂಡು ಬಿಜೆಪಿ ಹೈಕಮಾಂಡ್ ಅಂಗಳದಲ್ಲಿದ್ದು. ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಬಿಜೆಪಿ ಹೈಕಮಾಂಡ್ ಆಸಕ್ತಿಯನ್ನೇ ತೋರ್ತಿಲ್ಲ. ರಾಜ್ಯದ ಬಣ ರಾಜಕೀಯದಿಂದ ಬೇಸತ್ತ ಕೇಸರಿ ಹೈಕಮಾಂಡ್ ಸದ್ಯಕ್ಕೆ ರಿಸ್ಕ್ ಬೇಡವೇ ಬೇಡ ಅನ್ನುತ್ತಿದ್ಯಂತೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments