Webdunia - Bharat's app for daily news and videos

Install App

ಸದನದಲ್ಲೇ ಭರ್ಜರಿ ಊಟ, ಬ್ಲಾಂಕೆಟ್ ಹೊದ್ದು ಮಲಗಿದ ಬಿಜೆಪಿ ಶಾಸಕರು

Krishnaveni K
ಗುರುವಾರ, 25 ಜುಲೈ 2024 (09:03 IST)
ಬೆಂಗಳೂರು: ರಾಜ್ಯ ಸರ್ಕಾರದ ಮುಡಾ ಹಗರಣದ ವಿರುದ್ಧ ಅಹೋರಾತ್ರಿ ಧರಣಿ ನಡೆಸಿದ ಬಿಜೆಪಿ ಶಾಸಕರು ಸದನದಲ್ಲೇ ನಿನ್ನೆ ರಾತ್ರಿಯಿಡೀ ಕಾಲ ಕಳೆದಿದ್ದಾರೆ. ಭಜನೆ, ಹಾಡು ಹೇಳಿಕೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಬಳಿಕ ಅಲ್ಲಿಯೇ ಬ್ಲಾಂಕೆಟ್ ಹೊದ್ದು ಮಲಗಿದ್ದಾರೆ.

ಬಿಜೆಪಿ ಶಾಸಕರು ನಿನ್ನೆ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದರು. ಬಳಿಕ ವಿಪಕ್ಷ ನಾಯಕ ಆರ್ ಅಶೋಕ್ ಆದಿಯಾಗಿ ಎಲ್ಲರೂ ಸದನದಲ್ಲೇ ಕಾಲ ಕಳೆದರು. ಈ ವೇಳೆ ಹನುಮಾನ್ ಚಾಲೀಸಾ, ಭಜನೆ, ಹರಿಕತೆ ಮಾದರಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇನ್ನು ರಾತ್ರಿ ಬಿಜೆಪಿ ಶಾಸಕರಿಗೆ ಭರ್ಜರಿ ಊಟದ ವ್ಯವಸ್ಥೆ ಮಾಡಲಾಗಿತ್ತು. ವಿಧಾನಸಭೆಯ ಪಡಸಾಲೆಯಲ್ಲೇ ಕೆಲವು ಹೊತ್ತು ಟಿವಿ ನೋಡುತ್ತಾ, ಮೊಬೈಲ್ ವೀಕ್ಷಿಸುತ್ತಾ ಕಾಲ ಕಳೆದರು. ಶಾಸಕರಿಗಾಗಿಯೇ ಸರ್ಕಾರದ ವತಿಯಿಂದ ಎಲ್ಲಾ ವ್ಯವಸ್ಥೆ ಮಾಡಲಾಗಿತ್ತು. ಅದರಂತೆ ಸಂಜೆಯೇ ಬ್ಲಾಂಕೆಟ್ ಗಳ ರಾಶಿಯೇ ಬಂದಿತ್ತು.

ಅದರಂತೆ ರಾತ್ರಿವರೆಗೂ ಪರಸ್ಪರ ಮಾತನಾಡುತ್ತಾ ಕಾಲ ಕಳೆದ ಶಾಸಕರು ಬಳಿಕ ಅಲ್ಲಿಯೇ ಬ್ಲಾಂಕೆಟ್ ಹೊದ್ದು ಮಲಗಿದ್ದಾರೆ. ಬಿಜೆಪಿ ಶಾಸಕರಿಗೆ ಮಿತ್ರ ಪಕ್ಷ ಜೆಡಿಎಸ್ ಸದಸ್ಯರೂ ಸಾಥ್ ನೀಡಿದ್ದರು. ಇಂದೂ ಸದನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಧರಣಿ ಮುಂದುವರಿಯುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ
Show comments