Publish Date: Tue, 28 Jan 2020 (06:54 IST)
Updated Date: Tue, 28 Jan 2020 (06:56 IST)
ಹುಬ್ಬಳ್ಳಿ : ಸಿಎಎ ಜಾರಿಗೆ ತರುವುದರ ಮೂಲಕ ಅಂಬೇಡ್ಕರ್ ಹಾಗೂ ದಲಿತ ಸಮುದಾಯಕ್ಕೆ ಬಿಜೆಪಿ ಪಕ್ಷ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಮುಖಂಡರೊಬ್ಬರು ಎಡವಟ್ಟು ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಎಸ್ ಸಿ, ಎಸ್ ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಬೀಳಗಿ, ಸಂವಿಧಾನದ ಬಗ್ಗೆ ಅತ್ಯಂತ ಭಾವನಾತ್ಮಕ ಅಭಿಪ್ರಾಯವನ್ನು ಹೊಂದಿರುವ ದಲಿತ ಸಮುದಾಯ ಹಾಗೂ ಅಂಬೇಡ್ಕರ್ ಅವರ ಬಗ್ಗೆ ತಪ್ಪು ಸಂದೇಶವನ್ನು ರವಾನೆ ಮಾಡಲಾಗುತ್ತಿದೆ ಎಂದು ಹೇಳುತ್ತಿದ್ದ ಅವರು ಮಾತಿನ ಭರಾಟೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವ ಮೂಲಕ ಅಂಬೇಡ್ಕರ್ ಹಾಗೂ ದಲಿತ ಸಮುದಾಯಕ್ಕೆ ಭಾರತೀಯ ಜನತಾ ಪಾರ್ಟಿ ಅನ್ಯಾಯ ಮಾಡುತ್ತಿದ್ದಾರೆ ಎಂದು ಎಡವಟ್ಟು ಹೇಳಿಕೆ ನೀಡಿದ್ದಾರೆ.