Webdunia - Bharat's app for daily news and videos

Install App

ಸಿಎಂ ಯೋಗಿ ವಿರುದ್ಧ ದಿನೇಶ್ ಗುಂಡೂರಾವ್ ವಿವಾದಿತ ಹೇಳಿಕೆಗೆ ಜಾತಿ ಬಣ್ಣ!

Webdunia
ಸೋಮವಾರ, 16 ಏಪ್ರಿಲ್ 2018 (09:10 IST)
ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹವಾಗಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಬಿಜೆಪಿ ಕಟುವಾಗಿ ಟೀಕಿಸಿದ್ದು, ಇದೀಗ ಪ್ರಕರಣಕ್ಕೆ ಜಾತಿ ಬಣ್ಣ ಅಂಟಿಕೊಂಡಿದೆ.

ಸಿಎಂ ಯೋಗಿ ಮೇಲೆ ಹಲ್ಲೆ ನಡೆಸುವಂತೆ ದಿನೇಶ್ ಗುಂಡೂರಾವ್ ನೀಡಿರುವ ಹೇಳಿಕೆ ಒಂದು ರಾಜ್ಯದ ಮುಖ್ಯಮಂತ್ರಿಗೆ ಮಾಡಿದ ಅವಮಾನ ಮಾತ್ರವಲ್ಲ, ಇಡೀ ನಾಥ್ ಸಮುದಾಯಕ್ಕೆ ಮಾಡಿದ ಅವಮಾನ.

ಆದಿಚುಂಚನಗಿರಿಯ ಮಠಾಧೀಶರು ಮತ್ತು ಸಿಎಂ ಯೋಗಿ ನಾಥ್ ಕುಟುಂಬಕ್ಕೆ ಸೇರಿದವರು. ದಿನೇಶ್ ಗುಂಡೂರಾವ್ ಇದೀಗ ಇಬ್ಬರಿಗೂ ಅವಮಾನ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಆರೋಪಿಸಿದ್ದಾರೆ.

ಅತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕೂಡಾ ಇದೇ ರೀತಿಯ ಮಾತನಾಡಿದ್ದಾರೆ. ಕರ್ನಾಟಕದಲ್ಲಿರುವ ಹಲವಾರು ನಾಥ ಕುಟುಂಬಕ್ಕೆ ಸೇರಿದ ಜನರು ದಿನೇಶ್ ಗುಂಡೂರಾವ್ ಮತ್ತು ಕಾಂಗ್ರೆಸ್ ನ್ನು ಕ್ಷಮಿಸಲಾರರು ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಹಲವು ಬಿಜೆಪಿ ನಾಯಕರಿಂದ ದಿನೇಶ್ ಗುಂಡೂರಾವ್ ಹೇಳಿಕೆಗೆ ಖಂಡನೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮುಂದಿನ ಸುದ್ದಿ
Show comments