ರಾಜ್ಯದಲ್ಲಿ ಬಿಜೆಪಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

Webdunia
ಗುರುವಾರ, 28 ಜುಲೈ 2022 (14:13 IST)
ಹತ್ಯೆ ನಂತರ ರಾಜ್ಯಾದ್ಯಂತ ಅನೇಕ ಯುವ ಮುಖಂಡರು ತಮ್ಮ ಪಕ್ಷದ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಈ ರಾಜೀನಾಮೆ ಪರ್ವ ಮುಂದುವರಿದಿದ್ದು, ವಿಜಯಪುರ ಜಿಲ್ಲೆಯ ಜಿಲ್ಲಾ ಸಾಮಾಜಿಕ ಜಾಲ ತಾಣ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಕೋಷ್ಠ ಜಿಲ್ಲಾ ಸಂಚಾಲಕ ಸಂದೀಪ ಪಾಟೀಲ್ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣ ಸಮಿತಿಯ 9 ಮಂಡಲಗಳ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
 
ಪ್ರವೀಣ್ ಹತ್ಯೆ ಖಂಡಿಸಿ ವಿಜಯಪುರ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಸಮಿತಿಯ 9 ಮಂಡಲಗಳ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಈ ಹಿಂದೆ ನಡೆದ ಕೊಲೆಗಳಿಗೆ ಯಾವ ರೀತಿ ನ್ಯಾಯ ಸಿಕ್ಕಿದೆ ಎಂದು ನಮ್ಮ ಕಣ್ಣಮುಂದೆ ಇದೆ. ಕಠಿಣ ಕ್ರಮದ ಭರವಸೆ ಭರವಸೆಯಾಗಿಯೇ ಉಳಿದ ಕಾರಣ ಸಾಮೂಹಿಕ ರಾಜೀನಾಮೆ ನೀಡುತ್ತಿರುವುದಾಗಿ ಉಲ್ಲೇಖಿಸಿ ರಾಜೀನಾಮೆ ಪತ್ರವನ್ನು ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಅವರಿಗೆ ಸಲ್ಲಿಸಿದ್ದಾರೆ.
 
ಬಿಜೆಪಿ ಇದೊಂದು ಕೇವಲ ರಾಜಕೀಯ ಪಕ್ಷವಲ್ಲ, ಈ ಪಕ್ಷಕ್ಕೆ ತನ್ನದೇ ಆದಂತಹ ಇತಿಹಾಸ ಇದೆ. ವಿಚಾರ ಸಿದ್ದಾಂತಗಳಿಗಾಗಿ ಅನೇಕ ಕಾರ್ಯಕರ್ತರ ಬಲಿದಾನ ನಡೆದಿರುವಂತಹದ್ದು ಇತಿಹಾಸವಾದರೆ, ಇಂದಿನ ಕಾಲಘಟ್ಟದಲ್ಲೂ ಕೂಡ ಸೈದ್ಧಾಂತಿಕ ವಿಚಾರಧಾರೆಗೆ ಹೋರಾಡುವಂತಹ ದುರ್ಗತಿ ಬಂದು ಒದಗಿರುವುದು ಕಾರ್ಯಕರ್ತರಿಗೆ ನೋವಾಗುತ್ತದೆ. ಹಿಂದೆಲ್ಲ ನಡೆದಂತಹ ಕೊಲೆಗಳಿಗೆ ಯಾವ ರೀತಿಯಲ್ಲಿ ನ್ಯಾಯ ಸಿಕ್ಕಿದೆ ಎನ್ನುವುದು ನಮ್ಮ ಕಣ್ಣ ಮುಂದೆಯೇ ಇದೆ. ಕಠಿಣ ಕ್ರಮ ಎನ್ನುವ ಭರವಸೆ ಭರವಸೆಯಾಗಿ ಉಳಿದಿರುವ ಕಾರಣ ವಿಜಯಪುರ ಜಿಲ್ಲಾ ಸಮಿತಿ ಹಾಗೂ ಒಂಬತ್ತು ಮಂಡಳಗಳ ಪೂರ್ವ ಸಮಿತಿ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ. ಧನ್ಯವಾದಗಳು ಎಂದು ರಾಜೀನಾಮೆ ಪತ್ರದಲ್ಲಿ ಬರೆಯಲಾಗಿದೆ. ಆದರೆ, ಜಿಲ್ಲಾಧ್ಯಕ್ಷರು ರಾಜೀನಾಮೆಯನ್ನು ಅಂಗೀಕರಿಸಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪೆಟ್ರೋಲ್ ಬಂಕ್ ನಲ್ಲಿ ಸಿಗರೇಟು ಸೇದುವುದನ್ನು ತಡೆದಿದ್ದಕ್ಕೆ ಕೋಪದಿಂದ ಈ ಭೂಪ ಮಾಡಿದ್ದೇನು Video ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ಮೋಹನ್ ಭಾಗವತ್ ಚಲಿಸುತ್ತಿದ್ದ ರೈಲಿಗೆ ಕಲ್ಲು

ಮೆಟ್ಟಿಲಿನಿಂದ ಬೀಳುತ್ತಿದ್ದ ಮಗುವನ್ನು ಹೀರೋ ಥರಾ ಹಿಡಿದು ಪ್ರಾಣ ಉಳಿಸಿದ ವ್ಯಕ್ತಿ: shocking video

ಮುಂದಿನ ಸುದ್ದಿ
Show comments