ಸಿಎಂ ವಿರುದ್ಧ ಏಕವಚನದಲ್ಲಿ ವಾಗ್ದಾಳಿ: ಬಿಜೆಪಿ ಶಾಸಕನಿಗೆ ಷರತ್ತುಬದ್ಧ ಜಾಮೀನು

Webdunia
ಶನಿವಾರ, 11 ನವೆಂಬರ್ 2017 (18:26 IST)
ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ದೂರು ದಾಖಲಾಗಿದ್ದು, ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಬಿಡುಗಡೆಗೊಳಿಸಿದೆ.
ಸಿಎಂ ವಿರುದ್ಧ ಏಕವಚನ ಪ್ರಯೋಗಿಸಿದ್ದಲ್ಲದೇ,ಪ್ರಚೋದನಾಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
 
ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಲ್ಲದೇ ಹಿಂದುಗಳಿಗಾಗಿ ಖಡ್ಗ ಹಿಡಿಯಲು ಸಿದ್ದ ಎಂದು ಘೋಷಿಸಿದ್ದರು. ಪ್ರಚೋದನಾಕಾರಿ ಭಾಷಣದ ವಿರುದ್ಧ ಕಾಂಗ್ರೆಸ್ ಮುಖಂಡರು ಶಾಸಕ ಪಾಟೀಲ್ ವಿರುದ್ಧ ದೂರು ದಾಖಲಿಸಿದ್ದರು.
 
ದೂರಿನ ಹಿನ್ನೆಲೆಯಲ್ಲಿ ಶಾಸಕ ಸಂಜಯ್ ಪಾಟೀಲ್ ಕೋರ್ಟ್‌ಗೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments