ದಸರಾ ವಿವಾದದ ನಡುವೆ ಮೈಸೂರಿನಲ್ಲಿ ನಿರ್ಮಾಣವಾಗುತ್ತಿದೆ ದರ್ಗಾ: ಶಾಸಕ ಶ್ರೀವತ್ಸ ಆಕ್ರೋಶ

Krishnaveni K
ಮಂಗಳವಾರ, 16 ಸೆಪ್ಟಂಬರ್ 2025 (10:42 IST)
Photo Credit: X
ಮೈಸೂರು: ಒಂದೆಡೆ ದಸರಾ ಉತ್ಸವಕ್ಕೆ ಮುಸ್ಲಿಂ ಧರ್ಮೀಯರಾದ ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುತ್ತಿರುವುದಕ್ಕೆ ಹಿಂದೂಗಳಿಂದ ವಿರೋಧ ವ್ಯಕ್ತವಾಗುತ್ತಿದೆ. ಇದರ ನಡುವೆ ಮೈಸೂರಿನಲ್ಲಿ ಸದ್ದಿಲ್ಲದೇ ದರ್ಗಾವೊಂದರ ನಿರ್ಮಾಣಕ್ಕೆ ಸ್ಥಳೀಯಾಡಳಿತ ಒಪ್ಪಿಗೆ ನೀಡಿರುವುದು ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

ಗಾಡಿ ಚೌಕದಲ್ಲಿ ದರ್ಗಾ ನಿರ್ಮಿಸಲು ಮೈಸೂರು ಮಹಾನಗರ ಪಾಲಿಕೆ ನೋಟಿಫಿಕೇಷನ್ ನೀಡಿದೆ. ಸರ್ಕಾರಿ ಜಾಗದಲ್ಲಿ ಈ ರೀತಿ ದರ್ಗಾ ನಿರ್ಮಿಸಲು ಮುಂದಾಗಿರುವುದು ಅಕ್ರಮ. ಈ ನೋಟಿಫಿಕೇಷನ್ ಕೂಡಲೇ ಹಿಂಪಡೆಯಬೇಕು ಎಂದು ಶಾಸಕ ಶ್ರೀವತ್ಸ ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕೆಗಳಲ್ಲಿ ನೋಟಿಸ್ ನೀಡಲಾಗಿದ್ದು, ಆಕ್ಷೇಪಣೆ ಇದ್ದರೆ 15 ದಿನಗಳೊಳಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ಕೆಆರ್ ಗಾಡಿ ಚೌಕದಲ್ಲಿ ಉದ್ಯಾನವನ, ತೆರೆದ ಪ್ರದೇಶದಲ್ಲಿ ದರ್ಗಾ ನಿರ್ಮಿಸಲು ಹೊರಟಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಆ ಜಾಗ ಸುಮಾರು 45 ಸಾವಿರ ಚದರ ಅಡಿಯಷ್ಟಿದೆ. ಗೆಜೆಟ್ ಇಯರ್ 1965 ರ ಉಲ್ಲೇಖ ಇದೆ. ಇದು ವಕ್ಫ್ ಆಸ್ತಿ ಎನ್ನುತ್ತಿದ್ದಾರೆ. ಆದರೆ ಗೆಜೆಟ್ ನಲ್ಲಿ ತಪ್ಪಿದೆ. ಆ ಜಾಗವೇ ಬೇರೆ, ಈ ಜಾಗವೇ ಬೇರೆ. 2025 ರಲ್ಲಿ ಖಾತೆ ಮಾಡಲು ಮುಂದಾಗಿದ್ದಾರೆ. ಆ ಜಾಗದಲ್ಲಿ ಪಿಲ್ಲರ್ ಹಾಕುತ್ತಿದ್ದಾರೆ. ಎಲ್ಲರೂ ದಸರಾದಲ್ಲಿ ಮುಳುಗಿರುವಾಗ ಸದ್ದಿಲ್ಲದೇ ನಗರ ಪಾಲಿಕೆ ಈ ಜಾಗವನ್ನು ಮುಸ್ಲಿಂ ಟ್ರಸ್ಟ್ ಗೆ ಖಾತೆ ಮಾಡಲು ಮುಂದಾಗಿದೆ. ಕೋಮು ಸೌಹಾರ್ದತೆ ಕಾಪಾಡಬೇಕಾದ ಪಾಲಿಕೆಯೇ ಕೋಮು ಸೌಹಾರ್ದತೆ ಹಾಳು ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET ಪರೀಕ್ಷೆಗೆ ಹಾಜರಾಗಬೇಕಾದ ವಿದ್ಯಾರ್ಥಿನಿ ಪರೀಕ್ಷೆಗೂ ಮುನ್ನಾ ಸಾವಿಗೆ ಶರಣು, ಡೆತ್‌ನೋಟ್‌ನಲ್ಲಿ ಏನಿದೆ ಗೊತ್ತಾ

ಅಧಿಕೃತವಾಗಿ ಬಿಕೆ ಹರಿಪ್ರಸಾದ್‌ಗೆ ಕೆಪಿಸಿಸಿ ಅಧಿಕಾರ ಹಸ್ತಾಂತರ ಮಾಡಿದ ಡಿಕೆ ಶಿವಕುಮಾರ್

ಮಹಾರಾಷ್ಟ್ರ: ದೇವಸ್ಥಾನದ ಸಭಾ ಮಂಟಪ ಕುಸಿದು 7 ಮಂದಿ ಸಾವನ್ನಪ್ಪಿದ ಆಘಾತಕಾರಿ ಘಟನೆಯ ವಿಡಿಯೋ

Video, ಯೋಗ ಮಾಡುವಾಗ ಪರದಾಡಿದ ಬಿಹಾರ ಆರೋಗ್ಯ ಸಚಿವ ನಿಶಾಂತ್ ಕುಮಾರ್‌

Video, ತನ್ನ ಸುರಕ್ಷತೆಯನ್ನು ಲೆಕ್ಕಿಸದೆ ವಯಸ್ಸಾದ ಮಹಿಳೆಗೆ ಒಂದು ಹನಿ ನೀರು ಸೋಕದ ಹಾಗೇ ಕಾಪಾಡಿದ ಇಂಡಿಗೋ ವಿಮಾನ ಸಿಬ್ಬಂದಿ

ಮುಂದಿನ ಸುದ್ದಿ
Show comments