Publish Date: Sun, 11 Aug 2019 (11:59 IST)
Updated Date: Sun, 11 Aug 2019 (12:01 IST)
ಚಿಕ್ಕಮಗಳೂರು : ನೆರೆ ಸಂತ್ರಸ್ತರ ನೆರವಿಗೆ ಇಡೀ ರಾಜ್ಯದ ಜನತೆಯೇ ಸಹಾಯಹಸ್ತ ಚಾಚುತ್ತಿರುವಾಗ, ಸಹಾಯ ಕೇಳಿದ ಸಂತ್ರಸ್ತರ ಮೇಲೆ ಬಿಜೆಪಿ ಶಾಸಕರೊಬ್ಬರು ದರ್ಪ ತೋರಿದ ಘಟನೆ ನಡೆದಿದೆ.
ಮಲೆನಾಡಿನಲ್ಲಿ ಸುರಿಯುತ್ತಿರುವ ಮಹಾಮಳೆಗೆ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಮುದುಗುಂಡಿ ಗ್ರಾಮವು ಕೂಡ ಮಹಾ ಮಳೆಗೆ ಮುಳುಗಿದ್ದು, ಜನ, ಜಾನುವಾರಗಳು ಪರದಾಡುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಅಲ್ಲಿನ ಯುವಕನೊಬ್ಬ ಪ್ರವಾಹಕ್ಕೆ ಮನೆ ಕೊಚ್ಚಿ ಹೋಗಿದೆ, ಸಹಾಯ ಮಾಡಿ ಎಂದು ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಕರೆ ಮಾಡಿದ್ದನು. ಈ ವೇಳೆ ಸಿಟ್ಟಿಗೆದ್ದ ಶಾಸಕರು ಅವಾಚ್ಯ ಶಬ್ದಗಳಿಂದ ಬಾಯಿಗೆ ಬಂದಂತೆ ಯುವಕನಿಗೆ ನಿಂದಿಸಿದ್ದಾರೆ ಎನ್ನಲಾಗಿದೆ.
pavithra
Publish Date: Sun, 11 Aug 2019 (11:59 IST)
Updated Date: Sun, 11 Aug 2019 (12:01 IST)