Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕಲಬುರಗಿ : ಬಿಜೆಪಿ ವತಿಯಿಂದ ಕಲಬುರಗಿಯಲ್ಲಿ ಅ.30ರಂದು ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಓಬಿಸಿ ಸಮಾವೇಶ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಕಾರ್ಯಕ್ರಮ ನಡೆಯುವ ಸ್ಥಳದ ಪರಿಶೀಲನೆ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವುದು ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಅವರ ತತ್ವ ಸಿದ್ಧಾಂತವೇ ಬೇರೆ ನಮ್ಮ ತತ್ವ ಸಿದ್ಧಾಂತವೇ ಬೇರೆ ಇದೆ.
ಈ ಹಿಂದೆಯೂ ಅವರು ಹಲವು ಹುದ್ದೆಗಳು ಅಲಂಕರಿಸಿದ್ದರು. ಆದರೂ ಯಾವುದೇ ಪರಿಣಾಮ ಬೀರಿಲ್ಲ. ಹೀಗಾಗಿ ರಾಜ್ಯದ ಮೇಲೆ ಝೀರೋ ಎಫೆಕ್ಟ್ ಎಂದು ಹೇಳಿದರು.