Webdunia - Bharat's app for daily news and videos

Install App

ಬಿಬಿಎಂಪಿ ಚುನಾವಣೆಗೆ ಬಿಜೆಪಿ ಮಾಸ್ಟರ್ ಪ್ಲಾನ್

Webdunia
ಶನಿವಾರ, 5 ಫೆಬ್ರವರಿ 2022 (18:54 IST)
ಬಿಬಿಎಂಪಿ ಚುನಾವಣೆ ಮೂರು ಪಕ್ಷಗಳಿಗೂ ಪ್ರತಿಷ್ಠೆಯ ಕಣ. ಅದರಲ್ಲೂ ಹೈಕಮಾಂಡ್‌ ಮುಂದೆ ಮಾನ ಉಳಿಸಿಕೊಳ್ಳಲು ರಾಜ್ಯ ಬಿಜೆಪಿ ಮುಂದಿರುವ ಅಗ್ನಿ ಪರೀಕ್ಷೆ. ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಗೆ ಬಿಬಿಎಂಪಿ ಚುನಾವಣೆಯಲ್ಲಿ ಗೆದ್ದು ಬೀಗದಿದ್ದರೆ ಮುಂದಿನ ದಿನಗಳನ್ನು ಅರಾಮವಾಗಿ ಮನೆಯಲ್ಲಿ ಕಳೆಯಬಹುದು.
ಕಾಂಗ್ರೆಸ್‌ ಗೆ ಬಿಬಿಎಂಪಿಯನ್ನು ಮತ್ತೊಮ್ಮೆ ಗೆದ್ದು ಮುಂದಿನ ವಿಧಾನಸಭಾ ಚುನಾವಣೆಯ ಹುರುಪನ್ನು ಇಮ್ಮಡಿ ಮಾಡಿಕೊಳ್ಳಬೇಕು. ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಡಿಕೆ ಶಿವಕುಮಾರ್‌ ಗೆ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಬಿಬಿಎಂಪಿ ಗೆಲ್ಲಿಸಿ ಮತ್ತೊಮ್ಮೆ ಪಕ್ಷದೊಳಗೆ ತಮ್ಮ ತಮ್ಮ ಹಿಡಿತ ಗಟ್ಟಿಗೊಳಿಸುವ ಅವಶ್ಯಕತೆ ಇದೆ. ಎಂದಿನಂತೆ ಜೆಡಿಎಸ್‌ ಗೆಲ್ಲುವ ಅಲ್ಪಸ್ವಲ್ಪ ವಾರ್ಡ್‌ಗಳನ್ನು ಮುಂದಿಟ್ಟು ಸ್ಥಾಯಿ ಸಮಿತಿಯ ಮೇಲೆ ತಮಗಿರುವ ಆಧಿಪತ್ಯ ಮುಂದುವರೆಸಿಕೊಳ್ಳುವ ಲೆಕ್ಕಾಚಾರವಂತೂ ಇದೆ. ಹೀಗೆ ಪ್ರತಿ ಪಕ್ಷಗಳಿಗೂ ಈ ಬಾರಿಯ ಬಿಬಿಎಂಪಿ ಚುನಾವಣೆ ಅಗ್ನಿ ಪರೀಕ್ಷೆಯ ಅಖಾಡವಾಗಿ ಮಾರ್ಪಾಡಾಗಿದೆ.
 
ಸಿಎಂ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ ಕಳೆದ ಬೈ ಎಲೆಕ್ಷನ್‌ ಹಾಗೂ ಸ್ಥಳೀಯ ಚುನಾವಣೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಸಾಧಿಸಿಕೊಂಡಿಲ್ಲ. ಇದು ಕಮಲ ಹೈ ಕಮಾಂಡ್‌ ರಾಜ್ಯ ಬಿಜೆಪಿಗರನ್ನು ತುಚ್ಛವಾಗಿ ಕಾಣೋದಕ್ಕೆ ದಾರಿ ಮಾಡಿ ಕೊಟ್ಟಿತು. ಹೀಗಾಗಿ ಈ ಬಿಬಿಎಂಪಿ ಚುನಾವಣೆ ರಾಜ್ಯ ಬಿಜೆಪಿ ಪಾಲಿಕೆಗೆ ಮಹತ್ವದ್ದು ಮತ್ತು ನಿರ್ಣಾಯಕ. ಇದೇ ಕಾರಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಹಾಗೂ ಸಿಎಂ ಬೊಮ್ಮಾಯಿ ವಿಶೇಷವಾಗಿರುವ ಪ್ಲ್ಯಾನ್‌ಗಳೆನ್ನೆಲ್ಲಾ ಮಾಡಿಕೊಂಡು ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿಯ ಓರ್ವ ನಾಯಕ ಪ್ರತಿಧ್ವನಿಯ ಪ್ರತಿನಿಧಿ ಜೊತೆಗೆ ಮಾತನಾಡುತ್ತಾ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ ಎಂಬ ಆರೋಪಕ್ಕೆ ಕಾಂಗ್ರೆಸ್ ನಾಯಕರೇ ಸಾಕ್ಷಿ: ವಿಜಯೇಂದ್ರ

ಮುಂದಿನ ಸುದ್ದಿ
Show comments