Webdunia - Bharat's app for daily news and videos

Install App

ಬಸನಗೌಡ ಪಾಟೀಲ್ ಯತ್ನಾಳ್ ಟೀಂ ವರ್ಸಸ್ ಬಿವೈ ವಿಜಯೇಂದ್ರ ಟೀಂ ವಾರ್ ಹೈಕಮಾಂಡ್ ಅಂಗಳಕ್ಕೆ

Krishnaveni K
ಮಂಗಳವಾರ, 26 ನವೆಂಬರ್ 2024 (10:51 IST)
ಬೆಂಗಳೂರು: ಒಡೆದ ಮನೆಯಾಗಿರುವ ರಾಜ್ಯ ಬಿಜೆಪಿ ನಾಯಕ ದುಮ್ಮಾನ ಈಗ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ವಕ್ಫ್ ಹೋರಾಟ ವಿಚಾರದಲ್ಲಿ ರಾಜ್ಯ ಬಿಜೆಪಿ ಎರಡು ಬಣವಾಗಿದೆ. ಇದೀಗ ಯತ್ನಾಳ್ ವಿರುದ್ಧ ವಿಜಯೇಂದ್ರ ಬಣ ದೆಹಲಿಗೆ ತೆರಳಿ ಹೈಕಮಾಂಡ್ ಗೆ ದೂರು ಸಲ್ಲಿಸಲು ತೀರ್ಮಾನಿಸಿದೆ.

ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ವಿರುದ್ಧ ಯತ್ನಾಳ್ ಆಂಡ್ ಟೀಂ ಮೊದಲಿನಿಂದಲೂ ಅಸಮಾಧಾನ ವ್ಯಕ್ತಪಡಿಸುತ್ತಲೇ ಇದ್ದಾರೆ. ಇವರಿಬ್ಬರ ಒಡಕು ರಾಜ್ಯದಲ್ಲಿ ನಡೆದಿದ್ದ ಉಪಚುನಾವಣೆ ಮೇಲೂ ಪರಿಣಾಮ ಬೀರಿದೆ. ಉಪಚುನಾವಣೆ ಸೋಲಿನ ಬಳಿಕ ಯತ್ನಾಳ್ ಬಹಿರಂಗವಾಗಿ ಈ ಸೋಲಿಗೆ ಯಡಿಯೂರಪ್ಪ ಮತ್ತು ಮಕ್ಕಳೇ ಕಾರಣ ಎಂದಿದ್ದರು.

ಇದೀಗ ವಕ್ಫ್ ವಿರುದ್ಧವಾಗಿ ವಿಜಯೇಂದ್ರ ಬಣ ತಮ್ಮನ್ನು ಕಡೆಗಣಿಸಿರುವುದಕ್ಕೆ ಪ್ರತ್ಯೇ ತಂಡ ರಚಿಸಿ ಯತ್ನಾಳ್ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ವಕ್ಫ್ ವಿರುದ್ಧ ಒಂದೆಡೆ ರಾಜ್ಯ ಸರ್ಕಾರದ  ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರೆ ಇತ್ತ ಬಿಜೆಪಿಯೇ ಒಡೆದ ಮನೆಯಂತಾಗಿದೆ.

ದೆಹಲಿಯಲ್ಲಿ ಈಗ ಕೇಂದ್ರ ನಾಯಕರು ಸಂಸತ್ ಅಧಿವೇಶನದಲ್ಲಿ ಬ್ಯುಸಿಯಾಗಿದ್ದಾರೆ. ಹಾಗಿದ್ದರೂ ಯತ್ನಾಳ್ ವಿರುದ್ಧ ದೂರು ನೀಡಲು ಮುಂದಾಗಿದ್ದು ಈ ನಾಯಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಒತ್ತಾಯಿಸಲಿದೆ. ಈಗ ಹೈಕಮಾಂಡ್ ರಾಜ್ಯ ಬಿಜೆಪಿಯ ಒಡಕಿಗೆ ಹೇಗೆ ತೇಪೆ ಹಚ್ಚುತ್ತದೆ ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments