Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಹುಬ್ಬಳ್ಳಿ ; ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ.
ಬಿಜೆಪಿ ಸೇರ್ಪಡೆ ಹಿನ್ನೆಲೆ ಬಸವರಾಜ ಹೊರಟ್ಟಿ ಅವರು, ನಾನು ಯಾರ ಮನಸ್ಸು ನೋವಿಸಿ ಜೆಡಿಎಸ್ ಬಿಡುತ್ತಿಲ್ಲ. ನಾನು ಈಗಾಗಲೇ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ನನ್ನ ನಿರ್ಧಾರ ತಿಳಿಸಿದ್ದೇನೆ.
ಈಗಾಗಲೇ ಬಿಜೆಪಿ ನಾಯಕರು ಎಲ್ಲ ಹಂತದ ನಾಯಕರ ಜೊತೆಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಿದರು. ಇದು ನನ್ನ ರಾಜಕೀಯ ಜೀವನಕ್ಕೆ ಅನಿವಾರ್ಯತೆ ಮತ್ತು ಅವಶ್ಯಕತೆಯಾಗಿತ್ತು. ಬಿಜೆಪಿ ಸೇರುತ್ತಿರುವುದು ಒಂದು ದಿಢೀರ್ ಬೆಳವಣಿಗೆ.
ಇದನ್ನು ಜಾಸ್ತಿ ದಿನ ಮುಚ್ಚಿಟ್ಟಿಕೊಳ್ಳುವ ಅವಶ್ಯಕತೆ ಇಲ್ಲ. ನನ್ನ ಜೊತೆಗೆ ಬಿಜೆಪಿಗೆ ಬನ್ನಿ ಅಂತ ಯಾರಿಗೂ ಬಲವಂತ ಮಾಡುವುದಿಲ್ಲ.