Webdunia - Bharat's app for daily news and videos

Install App

ಇವಿಎಂ ಮಿಷಿನ್‌ ಇರೋವರೆಗೆ ಬಿಜೆಪಿಗೇ ಗೆಲುವು: ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ವ್ಯಂಗ್ಯ

Sampriya
ಭಾನುವಾರ, 24 ನವೆಂಬರ್ 2024 (11:46 IST)
ಬೆಂಗಳೂರು: ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್‌ ಅವರು ಇವಿಎಂ ಮಿಷಿನ್ ವಿರುದ್ಧ ಧ್ವನಿಯೆತ್ತಿದ್ದಾರೆ. ಇವಿಎಂ ಮಿಷಿನ್‌ ಹ್ಯಾಕ್‌ನಿಂದಲೇ ಮಹಾರಾಷ್ಟ್ರ ಕಳೆದುಕೊಂಡಿದ್ದೇವೆ ಅನ್ನಿಸುತ್ತಿದೆ. ಸ್ಟ್ರಾಟಜಿ ಮಾಡುವುದರಲ್ಲೂ ನಾವು ಫೇಲ್ ಆಗಿದ್ದೇವೆ ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿ ನಾವು ಮಹಾ ವಿಕಾಸ ಅಗಾಡಿ ಅಧಿಕಾರಕ್ಕೆ ಬರುತ್ತದೆ ಎಂದುಕೊಂಡಿದ್ದೆವು. ಆದರೆ ಎಲ್ಲವೂ ಉಲ್ಟಾ ಆಗಿದೆ. ಅಶೋಕ್ ಗೆಹ್ಲೋಟ್, ಭಗೇಲ್ ಸೇರಿ ಅನುಭವಿ ಸಿಎಂಗಳು ಚರ್ಚೆ ಮಾಡಿದ್ದೇವೆ. ಬಹಳಷ್ಟು ಕಡೆ ಇವಿಎಂ ಮ್ಯಾನಿಪ್ಯುಲೆಟ್ ಮಾಡಿದ್ದಾರೆ ಎಂದು ಚರ್ಚೆ ಆಗಿದೆ. ಆದ್ರೆ ಜಾರ್ಖಂಡ್‌ನಲ್ಲಿ ಯಾಕೆ ಹಾಗಾಗಲಿಲ್ಲ? ಬಿಜೆಪಿಯವರು ಪ್ಲ್ಯಾನ್ ಆಫ್ ಆಕ್ಷನ್ ತರಹ ಇದನ್ನು ಮಾಡ್ತಾರೆ ಎಂದು ದೂರಿದ್ದಾರೆ.
 

ನಂಬಿಕೆ ಬರಬೇಕು ಅಂತ ಕೆಲವು ರಾಜ್ಯಗಳಲ್ಲಿ ಇವಿಎಂ ಹ್ಯಾಕ್ ಮಾಡುವುದಿಲ್ಲ. ಇವಿಎಂ ಹ್ಯಾಕ್‌ನಿಂದಲೇ ಮಹಾರಾಷ್ಟ್ರ ಕಳೆದುಕೊಂಡಿದ್ದೇವೆ ಅನ್ನಿಸುತ್ತಿದೆ. ಸ್ಟ್ರಾಟಜಿ ಮಾಡುವುದರಲ್ಲಿ ಕೂಡ ನಾವು ಫೇಲ್ ಆಗಿದ್ದೇವೆ. ಇವಿಎಂ ಇರುವ ತನಕ ಅವರೇ ಗೆಲ್ಲುತ್ತಾರೆ ಅನ್ನಿಸುತ್ತದೆ. ಬ್ಯಾಲೆಟ್ ಪೇಪರ್ ಬರಬೇಕು ಅಂತ ನಾವು ಮೊದಲಿನಿಂದಲೂ ಒತ್ತಾಯ ಮಾಡುತ್ತಿದ್ದೇವೆ ಎಂದು ಹೇಳಿದರು.

ನಾವು ಕೊನೆ ಘಳಿಗೆಗೆ ಟಿಕೆಟ್ ಘೋಷಣೆ ಮಾಡಿದ್ವು, ಪಕ್ಷದಲ್ಲೂ ಗೊಂದಲ ಆಯ್ತು. ಶರದ್‌ ಪವಾರ್ ಗುಂಪು, ಉದ್ದವ್ ಠಾಕ್ರೆ ಗುಂಪಿನ ನಡುವೆ ಸರಿಯಾಗಿ ಹೊಂದಾಣಿಕೆ ಆಗಿಲ್ಲ. ವಿದರ್ಭದಲ್ಲಿ ಹೆಚ್ಚು ಸೀಟ್ ಬರಲಿಲ್ಲ. ಎಲ್ಲಿಯವರೆಗೆ ಇವಿಎಂ ಇರುತ್ತೆ ಅಲ್ಲಿಯವರೆಗೆ ಕಾಂಗ್ರೆಸ್ ಬರೋದು ಕಷ್ಟ ಆಗುತ್ತೆ ಎಂದು ನುಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments