Webdunia - Bharat's app for daily news and videos

Install App

ಉತ್ತರ ಕರ್ನಾಟಕದ ಎಲ್ಲ 14 ಕ್ಷೇತ್ರಗಳನ್ನೂ ಬಿಜೆಪಿ ಗೆಲ್ಲುತ್ತದೆ: ಅಣ್ಣಾಮಲೈ ವಿಶ್ವಾಸ

Sampriya
ಗುರುವಾರ, 2 ಮೇ 2024 (14:14 IST)
Photo Courtesy X
ಬಾಗಲಕೋಟೆ:  ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್‌ ಅಧಿಕಾರಿ ಕೆ ಅಣ್ಣಾಮಲೈ ಅವರು ಬಿಜೆಪಿ ಅಭ್ಯರ್ಥಿಗಳ ಪರ ರಾಜ್ಯದಲ್ಲಿ ಬಿರುಸಿನ ಮತಬೇಟೆ ನಡೆಸುತ್ತಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಪರ ಅವರು ಗುರುವಾರ ಮತಯಾಚನೆ ಮಾಡಿದರು.

ರಾಜ್ಯದಲ್ಲಿ ಉಳಿದ 14 ಕ್ಷೇತ್ರಗಳಿಗೆ ಮೇ 7ರಂದು ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಅಣ್ಣಾಮಲೈ ಪ್ರಚಾರ ನಡೆಸಿದ್ದಾರೆ. ಜಮಖಂಡಿ ಮತ್ತು ರಬಕವಿ ಬನಹಟ್ಟಿಯಲ್ಲಿ ಅವರು ಪ್ರಚಾರ ನಡೆಸಿದರು. ಈ ವೇಳೆ 2019ರ ಚುನಾವಣೆಯಂತೆ ಉತ್ತರ ಕರ್ನಾಟಕದ ಎಲ್ಲಾ 14 ಸ್ಥಾನಗಳನ್ನು ಬಿಜೆಪಿ ಈ ಬಾರಿಯೂ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸೋಲುತ್ತಾ ಇರುವ ಪಕ್ಷ. ಸೋಲುವವರು ಹತಾಶೆಯಲ್ಲಿ ಏನೇನೋ ಮಾತನಾಡುತ್ತಾರೆ. ನಾವು 10 ವರ್ಷ ಕೆಲಸ ಮಾಡಿದ್ದೇವೆ. ನಮ್ಮ ಕೆಲಸವನ್ನು ಜನರು ನೋಡಿದ್ದಾರೆ. ಇನ್ನೂ 5 ವರ್ಷ ಮೋದಿಜಿ ಬೇಕು. ಜನರು ಈ ಬಾರಿಯೂ ಎನ್​ಡಿಎಯನ್ನು ಬೆಂಬಲಿಸಲು ತೀರ್ಮಾನ ಮಾಡಿದ್ದಾರೆ ಎಂದು ಅಣ್ಣಾಮಲೈ ಪ್ರತಿಕ್ರಿಯಿಸಿದರು.

ಸೋನಿಯಾಗಾಂಧಿ, ರಾಹುಲ್‌ ಗಾಂಧಿ ಪ್ರತಿನಿಧಿಸಿದ್ದ ಅಮೇಥಿ, ರಾಯಬರೇಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿ ನಿಲ್ಲಿಸಲು ಸಾಧ್ಯವಾಗುತ್ತಿಲ್ಲ. ಆ ಹತಾಶೆಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಇದೆ ಎಂದೂ ಅಣ್ಣಾಮಲೈ ಲೇವಡಿ ಮಾಡಿದರು.

ಅಣ್ಣಾಮಲೈ ಅವರು ತಮಿಳುನಾಡಿನ ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ತಮಿಳುನಾಡಿನಲ್ಲಿ ಚುನಾವಣೆ ಆದ ಬಳಿಕ ಕೇರಳ ಹಾಗೂ ಕರ್ನಾಟಕದಲ್ಲಿ ಅವರು ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

ಮುಂದಿನ ಸುದ್ದಿ
Show comments