Webdunia - Bharat's app for daily news and videos

Install App

ಶೋಭಾ ಕರಂದ್ಲಾಜೆ ಪ್ರಚಾರ ವೇಳೆ ಯಡವಟ್ಟು: ಓರ್ವನ ಸಾವು

Krishnaveni K
ಸೋಮವಾರ, 8 ಏಪ್ರಿಲ್ 2024 (16:30 IST)
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಚುನಾವಣಾ ಪ್ರಚಾರದ ವೇಳೆ ನಿರ್ಲಕ್ಷದಿಂದಾಗಿ ಓರ್ವ ಕಾರ್ಯಕರ್ತನ ಸಾವಾಗಿದೆ.

ಕೆಆರ್ ಪುರಂನ ಟಿಸಿ ಪಾಳ್ಯದಲ್ಲಿ ಶೋಭಾ ಕರಂದ್ಲಾಜೆ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಬರುತ್ತಿದ್ದ ಓರ್ವನಿಗೆ ಶೋಭಾ ಬೆಂಗಾವಲು ವಾಹನ ಬಾಗಿಲು ಬಡಿದು ಅಪಘಾತವಾಗಿದೆ. ಇದರಿಂದಾಗಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು 55 ವರ್ಷದ ಪ್ರಕಾಶ್ ಎಂದು ಗುರುತಿಸಲಾಗಿದೆ.

ರಸ್ತೆ ಬದಿ ಕಾರು ಪಾರ್ಕ್ ಮಾಡಿ ಕಾರಿನಲ್ಲಿದ್ದವರು ಹಿಂದೆ ಮುಂದೆ ನೋಡದೇ ಬಾಗಿಲು ತೆರೆದಿದ್ದಾರೆ. ಇದರಿಂದಾಗಿ ಹಿಂದೆಯಿಂದ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಪ್ರಕಾಶ್ ನೆಲಕ್ಕೆ ಬಿದ್ದಿದ್ದಾರೆ. ನೆಲಕ್ಕೆ ಬಿದ್ದ ಅವರ ಮೇಲೆ ಹಿಂದಿನಿಂದ ಬಂದ ಖಾಸಗಿ ಬಸ್ ಹರಿದಿದೆ. ಪರಿಣಾಮ ತೀವ್ರ ಗಾಯಗೊಂಡ ಪ್ರಕಾಶ್ ಆಸ್ಪತ್ರೆ ಸಾಗಿಸುವ ಮಧ‍್ಯದಲ್ಲಿ ಸಾವನ್ನಪ್ಪಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಶೋಭಾ ಕರಂದ್ಲಾಜೆ ನಮ್ಮ ಪ್ರಚಾರದ ವೇಳೆ ಓರ್ವ ಕಾರ್ಯಕರ್ತನ ಸಾವಾಗಿದೆ. ಇದು ಅತ್ಯಂತ ದುರದೃಷ್ಟಕರ. ಪೋಸ್ಟ್ ಮಾರ್ಟಂ ಬಳಿಕ ಸಾವು ಹೇಗಾಗಿದೆ ಎಂದು ತಿಳಿಯಲಿದೆ. ಪ್ರಕಾಶ್ ನಿಷ್ಠಾವಂತ ಕಾರ್ಯಕರ್ತ. ಆತನ ಕುಟುಂಬಕ್ಕೆ ನೆರವು ನೀಡಲಾಗುವುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments