Webdunia - Bharat's app for daily news and videos

Install App

Kumbhmela Stampede: ಕುಂಭಮೇಳ ಕಾಲ್ತುಳಿತದಲ್ಲಿ ಮಡಿದವರ ಮೃತದೇಹ ಇಂದು ಬೆಳಗಾವಿಗೆ

Krishnaveni K
ಗುರುವಾರ, 30 ಜನವರಿ 2025 (09:29 IST)
ಬೆಳಗಾವಿ: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಸಾವನ್ನಪ್ಪಿದ್ದ ಬೆಳಗಾವಿಯ ನಾಲ್ವರ ಮೃತದೇಹ ಇಂದು ತವರಿಗೆ ಬರಲಿದೆ. ನಾಲ್ವರ ಸಾವಿನಿಂದ ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದೆ.

ಮಹಾಕುಂಭಮೇಳದಲ್ಲಿ ಮೌನಿ ಅಮವಾಸ್ಯೆ ದಿನ ಪುಣ್ಯಸ್ನಾನ ಮಾಡಲು ಹೋಗಿದ್ದಾಗ ನೂಕುನುಗ್ಗಲು ಉಂಟಾಗಿ ನಿನ್ನೆ ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ 30 ಭಕ್ತರು ಸಾವನ್ನಪ್ಪಿದ್ದರು ಎಂದು ಉತ್ತರ ಪ್ರದೇಶ ಸರ್ಕಾರ ಮಾಹಿತಿ ನೀಡಿದೆ. ಈ ಪೈಕಿ ನಾಲ್ವರು ಕರ್ನಾಟಕದವರೂ ಸೇರಿದ್ದಾರೆ.

44 ವರ್ಷದ ಜ್ಯೋತಿ ಹತ್ತರವಾಠ, ಪುತ್ರಿ ಮೇಘಾ (24) ಮತ್ತು ಶೆಟ್ಟಿ ಗಲ್ಲಿಯ 61 ವರ್ಷದ ಅರುಣ್ ಕೋರ್ಪಡೆ, ಶಿವಾಜಿನಗರದ 48 ವರ್ಷದ ಮಹಾದೇವಿ ಬಾವನೂರ ಅವರು ಕಾಲ್ತುಳಿತದಲ್ಲಿ ಸಾವನ್ನಪ್ಪಿದವರು.

ಇವರೆಲ್ಲರ ಮೃತದೇಹಗಳನ್ನು ಆಂಬ್ಯುಲೆನ್ಸ್ ಮೂಲಕ ದೆಹಲಿಗೆ ಕರೆತಂದು ಮಧ್ಯಾಹ್ನ 3.30 ರ ವಿಮಾನದಲ್ಲಿ ಬೆಳಗಾವಿಗೆ ಕರೆತರಲಾಗುತ್ತಿದೆ. ಸಂಜೆ 5.30 ರ ಸುಮಾರಿಗೆ ಬೆಳಗಾವಿಗೆ ಮೃತದೇಹಗಳು ಬರುವ ನಿರೀಕ್ಷೆಯಿದೆ. ಇವರ ಮೃತದೇಹಗಳನ್ನು ಕರೆತರಲು ಬೆಳಗಾವಿ ಡಿಸಿ ಮೊಹಮ್ಮದ್ ಇಬ್ಬರು ವಿಶೇಷ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments