ವಿದ್ಯಾರ್ಥಿ ಗುಂಪುಗಳ ನಡುವೆ ಬಾಂಬ್ ತೂರಾಟ!

Webdunia
ಮಂಗಳವಾರ, 5 ಜುಲೈ 2022 (19:41 IST)
ಉತ್ತರ ಪ್ರದೇಶದ ಪ್ರಯಾಗರಾಜ್‌ನ ಸಂಗಮ್‌ನಲ್ಲಿ ತಡರಾತ್ರಿ ಅಪ್ರಾಪ್ತ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಬಾಂಬ್‌ ತೂರಾಟ ನಡೆದಿದೆ.ಹುಟ್ಟುಹಬ್ಬದ ಆಚರಣೆಯಲ್ಲಿ ತೊಡಗಿದ್ದವರ ಮೇಲೆ ಮೊದಲಿಗೆ ಗುಂಪೊಂದು ಬಾಂಬ್‌ ಎಸೆದಿದೆ.ಇದಕ್ಕೆ ಪ್ರತಿಯಾಗಿ ಎದುರಾಳಿ ಗುಂಪು ಕೂಡ ಬಾಂಬ್‌ ಎಸೆದಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ.ಈ ಬಗ್ಗೆ ಮಾಹಿತಿ ಪಡೆದ ನಗರ ಎಸ್ಪಿ ದಿನೇಶ್ ಕುಮಾರ್ ಸಿಂಗ್, ಪೊಲೀಸ್ ಪಡೆಗಳೊಂದಿಗೆ ಸ್ಥಳಕ್ಕೆ ಧಾವಿಸಿದರು.ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.ಎರಡೂ ಗುಂಪಿನವರು ಒಂದೇ ಶಾಲೆಯಲ್ಲಿ ಓದುತ್ತಿದ್ದಾರೆ ಎನ್ನಲಾಗಿದೆ.ಸ್ನೇಹಿತನ ಹುಟ್ಟುಹಬ್ಬದ ಆಚರಣೆಗಾಗಿ ವಿದ್ಯಾರ್ಥಿಗಳ ಒಂದು ಗುಂಪು ಸಂಗಮ್‌ಗೆ ತೆರಳಿತ್ತು. ಅಷ್ಟರಲ್ಲಿ ಅಲ್ಲಿಗೆ ಬಂದಿದ್ದ ಇನ್ನೊಂದು ಗುಂಪು, ಆಚರಣೆಯಲ್ಲಿ ತೊಡಗಿದ್ದವರ ಮೇಲೆ ಬಾಂಬ್ ಎಸೆದಿತ್ತು. ಈ ಹಿಂದೆಯೂ ಎರಡೂ ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿದ್ದವು ಎಂದು ನಗರ ಎಸ್‌ಪಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments