Publish Date: Wed, 01 Dec 2021 (08:39 IST)
Updated Date: Wed, 01 Dec 2021 (08:53 IST)
ಮೈಸೂರು : ಇಬ್ಬರು ಯುವ ಪ್ರೇಮಿಗಳು ಜನುಮದ ಜೋಡಿಯಾಗಿ ಪರಸ್ಪರ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದ್ದಾರೆ.
ಹಾಗೆ ಪ್ರೇಮಿಗಳು ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಬಳಿ ನಡೆದಿದೆ. ಕೊನೆಗೆ ತೆಪ್ಪ ನಡೆಸುವ ಅಂಬಿಗರಿಂದ ಪ್ರೇಮಿಗಳ ರಕ್ಷಣೆಯಾಗಿದೆ. ಅಭಿ (19) ಮತ್ತು 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯಿಂದ ಆತ್ಮಹತ್ಯೆ ಯತ್ನ ನಡೆದಿದೆ. ಬಾಲಕಿಯು ಚಾಮರಾಜನಗರದ ಕಾಲೇಜು ವಿದ್ಯಾರ್ಥಿನಿಯಾಗಿದ್ದರೆ ಅಭಿ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾನೆ.
ಬಾಲಕಿಯ ಮನೆಯಲ್ಲಿ ಇವರಿಬ್ಬರ ಪ್ರೀತಿಯ ವಿಷಯ ತಿಳಿದ ಹಿನ್ನೆಲೆ ಮುಡಿಕಟ್ಟೆ ಬಳಿ ಪ್ರೇಮಿಗಳು ಕಪಿಲಾ ನದಿಗೆ ಹಾರಿದ್ದಾರೆ. ಇಬ್ಬರಿಗೂ ಈಗ ನಂಜನಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಂಜನಗೂಡು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ramya kosira
Publish Date: Wed, 01 Dec 2021 (08:39 IST)
Updated Date: Wed, 01 Dec 2021 (08:53 IST)