Webdunia - Bharat's app for daily news and videos

Install App

ಬಿಪಿಎಲ್ ಕಾರ್ಡ್ ರಾತ್ರೋರಾತ್ರಿ ಎಪಿಎಲ್ ಗೆ ಶಿಫ್ಟ್: ನಿಮ್ಮ ರೇಷನ್ ಕಾರ್ಡ್ ಕತೆ ಏನಾಗಿದೆ ಚೆಕ್ ಮಾಡಿಕೊಳ್ಳಿ

Krishnaveni K
ಶನಿವಾರ, 16 ನವೆಂಬರ್ 2024 (11:38 IST)
ಬೆಂಗಳೂರು: ಬಿಪಿಎಲ್ ಕಾರ್ಡ್ ಇದ್ದವರಿಗೆ ಸರ್ಕಾರ ರಾತ್ರೋ ರಾತ್ರಿ ಶಾಕ್ ಕೊಟ್ಟಿದೆ. ರಾಜ್ಯದ ಸುಮಾರು 60 ಸಾವಿರ ಬಿಪಿಎಲ್ ಕಾರ್ಡ್ ಇದ್ದಕ್ಕಿದ್ದ ಹಾಗೆ ಎಪಿಎಲ್ ಕಾರ್ಡ್ ಆಗಿ ಬದಲಾಗಿದೆ.

ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಅದರಂತೆ ಅನರ್ಹ ಕಾರ್ಡ್ ಗಳನ್ನು ರದ್ದುಗೊಳಿಸುವುದಾಗಿ ಈಗಾಗಲೇ ಸೂಚನೆ ನೀಡಿತ್ತು. ಆದಾಯ ತೆರಿಗೆ ಪಾವತಿ ಮಾಡುವವರು ವಾರ್ಷಿಕ ಆದಾಯ 1.2 ಲಕ್ಷಕ್ಕಿಂತ ಹೆಚ್ಚು ಇದ್ದಲ್ಲಿ ಅಂತಹ ಕಾರ್ಡ್ ಗಳನ್ನು ರದ್ದುಗೊಳಿಸಲಾಗುವುದು ಎಂದು ಸರ್ಕಾರ ಈಗಾಗಲೇ ಮಾನದಂಡ ಹೇಳಿತ್ತು.

ಅದರಂತೆ ಸರ್ಕಾರ ಪರಿಷ್ಕರಣೆ ನಡೆಸಿದೆ. ಸುಮಾರು 12 ಲಕ್ಷ ಅನರ್ಹ ಕಾರ್ಡ್ ಗಳನ್ನು ಪತ್ತೆ ಮಾಡಿತ್ತು. ಇದೀಗ ಏಕಾಏಕಿ 60 ಸಾವಿರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿದೆ. ಆದರೆ ಈ ಬಗ್ಗೆ ಹಲವು ಗ್ರಾಹಕರಿಗೆ ತಿಳಿದೇ ಇಲ್ಲ. ನ್ಯಾಯಬೆಲೆ ಅಂಗಡಿಗೆ ಹೋಗಿ ಬಯೋಮೆಟ್ರಿಕ್ ಮೇಲೆ ಬೆರಳಿಟ್ಟಾಗಲೇ ಸತ್ಯ ಗೊತ್ತಾಗಿರುವುದು.

ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವುದು ಗೊತ್ತಾದಾಗ ನೋಟಿಸ್ ನೀಡಲಾಗುತ್ತದೆ. ನಂತರದಲ್ಲಿ ಅಮಾನತಿನಲ್ಲಿಡಲಾಗುತ್ತದೆ. ಆದರೆ ಇಲ್ಲಿ ಯಾವುದೂ ಮಾಡಲಾಗಿಲ್ಲ ಎನ್ನುವುದು ಗ್ರಾಹಕರ ಅಳಲು. ಏಕಾಏಕಿ ಹೀಗೆ ಬಿಪಿಎಲ್ ಕಾರ್ಡ್ ನಿಂದ ತೆಗೆದು ಎಪಿಎಲ್ ಎಂದು ಮಾಡಿದರೆ ಹೇಗೆ ಎಂದು ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಹೀಗಾಗಿ ನೀವು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಈಗಲೇ ಹೋಗಿ ಚೆಕ್ ಮಾಡುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments