Webdunia - Bharat's app for daily news and videos

Install App

ಮಕ್ಕಳಿಗೂ ಕೋವಿಡ್ ಲಸಿಕೆ ನೀಡಲು ಬ್ರಿಟನ್ ನಿರ್ಧಾರ

Webdunia
ಗುರುವಾರ, 23 ಡಿಸೆಂಬರ್ 2021 (20:26 IST)
ಬ್ರಿಟನ್‌ನಲ್ಲಿ ಒಮೈಕ್ರಾನ್ ಪ್ರಬೇಧ ಕಾಣಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ದೈನಿಕ ಕೋವಿಡ್-19 ಪ್ರಕರಣಗಳ ಸಂಖ್ಯೆ ಲಕ್ಷದ ಗಡಿ ದಾಟುತ್ತಿದ್ದಂತೆಯೇ ಹೊಸ ಅಲೆ ಎದುರಿಸಲು ಸರ್ಕಾರ ಸಮರೋಪಾದಿ ಸಿದ್ಧತೆ ನಡೆಸಿದೆ.
ಸೋಂಕು ತಡೆಯುವ ಕ್ರಮವಾಗಿ ಐದರಿಂದ ಹನ್ನೊಂದು ವರ್ಷದವರೆಗಿನ ಮಕ್ಕಳಿಗೂ ಲಸಿಕೆ ಒದಗಿಸಲು ಒಪ್ಪಿಗೆ ನೀಡಿದೆ.
ಸೋಂಕಿತರ ಐಸೊಲೇಶನ್ ಅವಧಿಯನ್ನು ಕಡಿತಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಕ್ರಿಸ್ಮಸ್ ಬಳಿಕದ ನಿರ್ಬಂಧಗಳನ್ನು ವೇಲ್ಸ್ ಹಾಗೂ ಉತ್ತರ ಐರ್ಲೆಂಡ್ ಪ್ರಕಟಿಸಿದೆ. ಸ್ಕಾಟ್ಲೆಂಡ್ ಈಗಾಗಲೇ ಈ ಕ್ರಮ ಅನುಸರಿಸಿದ್ದು, ಆತಿಥ್ಯ ಉದ್ಯಮಗಳು ದೊಡ್ಡ ಕೂಟಗಳನ್ನು ಆಯೋಜಿಸದಂತೆ ಸೂಚಿಸಲಾಗಿದೆ.
ಫೈಝರ್-ಬಯೋ ಎನ್‌ ಟೆಕ್ ಕಡಿಮೆ ಡೋಸ್‌ನ ಹೊಸ ಲಸಿಕೆ ಸುರಕ್ಷಿತ ಹಾಗೂ ಪರಿಣಾಮಕಾರಿ ಎಂದು ದೃಢಪಟ್ಟಿರುವ ಹಿನ್ನೆಲೆಯಲ್ಲಿ 11 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲು ಅನುಮತಿ ನೀಡಲಾಗಿದೆ ಎಂದು ಬ್ರಿಟನ್‌ನ ಮೆಡಿಸಿನ್ಸ್ ಆ್ಯಂಡ್ ಹೆಲ್ತ್‌ಕೇರ್ ಪ್ರಾಡೆಕ್ಟ್ಸ್ ರೆಗ್ಯುಲೇಟರಿ ಏಜೆನ್ಸಿ ಹೇಳಿದೆ.
ಈ ವಯೋಮಿತಿಯ ಮಕ್ಕಳಿಗೆ ಇದರಿಂದಾಗುವ ಧನಾತ್ಮಕ ಪ್ರಯೋಜನನ್ನು ದೃಢಪಡಿಸಲು ಸಾಕಷ್ಟು ಪುರಾವೆಗಳು ಇವೆ ಎಂದು ಎಂಎಚ್‌ಆರ್‌ಎ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೂನ್ ರೈನ್ ಹೇಳಿದ್ದಾರೆ.
ಏತನ್ಮಧ್ಯೆ ದೇಶದಲ್ಲಿ ದೈನಿಕ ಪ್ರಕರಣಗಳು ದಾಖಲೆ ಮಟ್ಟಕ್ಕೆ ಏರಿವೆ. ಈಗಾಗಲೇ 1.48 ಲಕ್ಷ ಮಂದಿಯನ್ನು ಬಲಿಪಡೆದಿರುವ ದೇಶದಲ್ಲಿ ಬುಧವಾರ ಹೊಸದಾಗಿ 1,06,122 ಪ್ರಕರಣಗಳು ಬೆಳಕಿಗೆ ಬಂದಿವೆ. ಕಳೆದ ವರ್ಷದ ಬೇಸಿಗೆಯಲ್ಲಿ ಸಾಮೂಹಿಕ ಪರೀಕ್ಷೆ ಆರಂಭಿಸಿದ ಬಳಿಕ ಇದು ಗರಿಷ್ಠ ಸಂಖ್ಯೆಯ ಪ್ರಕರಣ ಎಂದು ಸರ್ಕಾರ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments