Publish Date: Mon, 15 May 2023 (16:00 IST)
Updated Date: Mon, 15 May 2023 (15:53 IST)
KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ರನ್ನು ಮುಖ್ಯಮಂತ್ರಿ ಮಾಡಿ ಎಂದು ಡಿಕೆಶಿ ಪರ ಸಂಸದ, ಸಹೋದರ ಡಿ.ಕೆ ಸುರೇಶ್ ತೀವ್ರ ಲಾಬಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲರನ್ನು ಭೇಟಿ ಮಾಡಿದ ಸಂಸದ ಡಿ.ಕೆ ಸುರೇಶ್, ಡಿಕೆಶಿಯನ್ನು ಸಿಎಂ ಮಾಡಿ ಎಂದು ಮನವಿ ಮಾಡಿದ್ದಾರೆ. ಹೈಕಮಾಂಡ್ ವಿಳಂಬ ಧೋರಣೆಗೆ ಡಿ.ಕೆ ಸುರೇಶ್ ಬೇಸರ ವ್ಯಕ್ತಪಡಿಸಿದ್ದಾರೆ. ಒಂದು ಸಾಲಿನ ನಿರ್ಣಯ ಅಂಗೀಕರಿಸಿ ಕಳುಹಿಸಲಾಗಿದೆ. ಆದರೆ ನಿರ್ಧಾರ ಪ್ರಕಟಿಸಲು ವಿಳಂಬ ಯಾಕೆ ಎಂದು ಸುರ್ಜೇವಾಲ ಬಳಿ ಬೇಸರ ಹೊರಹಾಕಿದ್ದಾರೆ ಎನ್ನಲಾಗಿದೆ. ಸಿಎಂ ಆಕಾಂಕ್ಷಿಗಳಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಮಧ್ಯಾಹ್ನದ ನಂತರ ಡಿ.ಕೆ ಶಿವಕುಮಾರ್ ಸಹ ದೆಹಲಿಗೆ ತೆರಳುವ ಸಾಧ್ಯತೆ ಇದೆ.