Publish Date: Mon, 29 Jul 2019 (11:57 IST)
Updated Date: Mon, 29 Jul 2019 (11:59 IST)
ಬೆಂಗಳೂರು : ಇಂದಿನ ಅಧಿವೇಶನದಲ್ಲಿ ಸಿಎಂ ಯಡಿಯೂರಪ್ಪ ಅವರು ವಿಶ್ವಾಸಮತ ಯಾಚನೆ ಮಾಡಿದ್ದು ಅದರಲ್ಲಿ ಗೆಲುವು ಸಾಧಿಸಿದ್ದಾರೆ.
ಬಹುಮತ ಕಳೆದುಕೊಂಡ ಹಿನ್ನಲೆಯಲ್ಲಿ ಜೆಡಿಎಸ್-ಕಾಂಗ್ರೆಸ್ ನ ಮೈತ್ರಿ ಸರ್ಕಾರ ಉರುಳಿದೆ. ಆದಕಾರಣ ಸರ್ಕಾರ ರಚನೆಗೆ ಬಿಜೆಪಿ ನಾಯಕರು ಮುಂದಾಗಿದ್ದು, ಶುಕ್ರವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಎಸ್ ಯಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಾಗೇ ರಾಜ್ಯಪಾಲರ ಆದೇಶದಂತೆ ಸೋಮವಾರದ ಕಲಾಪದಲ್ಲಿ ಬಹುಮತ ಸಾಬೀತು ಮಾಡುವುದಾಗಿ ಹೇಳಿದ್ದರು.
ಅದರಂತೆ ಇಂದಿನ ಕಲಾಪದ ವೇಳೆ ಸಿಎಂ ಯಡಿಯೂರಪ್ಪ ಅವರು ವಿಶ್ವಾಸಮತ ಯಾಚನೆ ಮಾಡಿದ್ದು ಅದರಲ್ಲಿ ಗೆಲುವು ಸಾಧಿಸಿದ್ದಾರೆ. ಧ್ವನಿಮತದ ಮೂಲಕ ವಿಶ್ವಾಸ ಮತ ಅಂಗೀಕಾರವಾಗಿದ್ದು, ಮುಂದಿನ 6 ತಿಂಗಳಕಾಲ ಬಿಎಸ್ ವೈ ಸರ್ಕಾರ ಸೇಫ್ ಎನ್ನಲಾಗಿದೆ.