ಬಿಜೆಪಿಗೆ ಬಿಎಸ್ ಪಿ ಶಾಸಕ ಎನ್. ಮಹೇಶ್ ಸೇರ್ಪಡೆ

Webdunia
ಗುರುವಾರ, 5 ಆಗಸ್ಟ್ 2021 (14:50 IST)
ಬೆಂಗಳೂರಿನ ಮಲ್ಲೇಶ್ವರದಲ್ಲಿನ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಎನ್. ಮಹೇಶ್ ಬಿಜೆಪಿಗೆ ಸೇರ್ಪಡೆಯಾದರು. ಮಹೇಶ್ ಅವರಿಗೆ ಪಕ್ಷದ ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಮಹೇಶ್ ಚಳುವಳಿಯ ಹಿನ್ನೆಲೆಯಿಂದ  ಬಂದವರು. ಅವರ ಸಂಘಟನಾ ಶಕ್ತಿ ಬಹು ದೊಡ್ಡದು. ಅವರು ಶಾಸಕರಾಗುವ ಮುನ್ನವೇ ದಲಿತರ ಹೃದಯ ಗೆದ್ದವರು. ಕೊಳ್ಳೆಗಾಲದ ಎಲ್ಲ ಜನಾಂಗ ಅವರನ್ನ ಆರಿಸಿದೆ ಎಂದರು.
ನಮ ಪಕ್ಷದ ಸಿದ್ಧಾಂತ ಮನವರಿಕೆಯಾದ ಮೇಲೆ ಮಹೇಶ್ ಪಕ್ಷಕ್ಕೆ ಬಂದಿದ್ದಾರೆ. ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಸ್ವಯಂ ಪ್ರೇರಣೆಯಿಂದ ಸರಕಾರಕ್ಕೆ ಬೆಂಬಲ ನೀಡಿದ್ದರು. ಈ ಹಿಂದೆ ಯಡಿಯೂರಪ್ಪನವರಿಗೆ ಸಹಕಾರ ಕೊಟ್ಟಿದ್ದರು. ಇಂದು ಅವರು ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ. ಅವರ ಸೇವೆಯನ್ನ ಪಕ್ಷ ಬಳಸಿಕೊಳ್ಳಲಿದೆ ಎಂದು ಅವರು ಹೇಳಿದರು.
ವಿಜಯೇಂದ್ರ ಮೈಸೂರು ಭಾಗದಲ್ಲಿ ಸುತ್ತಾಡಿದ್ದಾರೆ. ಅವರ ಶ್ರಮಕ್ಕೆ ಮಹೇಶ್ ಶಕ್ತಿ ಸೇರಿದರೆ ಬಲ. ಬಿಜೆಪಿಗೆ ಮತ್ತಷ್ಟು ಬಲ ಬಂದಂತಾಗಿದೆ. ಆ ಭಾಗದಲ್ಲಿ ಸಾಮರಸ್ಯದ ಅನ್ಯೋನ್ಯತೆ ಸ್ಥಾಪನೆಯಾಗಲಿದೆ. ಈಗ ಹೊಸ ಸರ್ಕಾರ ಬಂದಿದೆ. ಈ ವೇಳೆಯೇ ಈ ಸಂದೇಶವೂ ಸೇರಿಕೊಂಡಿದೆ ಎಂದು ಬೊಮ್ಮಾಯಿ ನುಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಪರಿಷ್ಕರಣೆ ಮಾಡ್ತಿರೋದು ಸರೀನಾ ಎಂದಿದ್ದಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ನಿಂಗೆ ನೋವಾದ್ರೆ ನಂಗೂ ನೋವಾಗುತ್ತೆ... ಪಾಲಕಿಗೆ ಗಾಯವಾಗಿದ್ದಕ್ಕೆ ಆನೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Viral

NEET ಪರೀಕ್ಷೆ 2026: ಸಿದ್ಧತೆ, ನಿಯಮಗಳು ಮತ್ತು ಪ್ರಮುಖ ವಿವರಗಳು ಇಲ್ಲಿದೆ

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಮನೆಗೇ ಬಂದು ಅಧಿಕಾರಿಗಳು ಕೇಳುವ ಈ 10 ಪ್ರಶ್ನೆಗಳಿಗೆ ಸಿದ್ಧರಾಗಿ

Karnataka weather: ವಾರಂತ್ಯದಲ್ಲಿ ರಾಜ್ಯದಲ್ಲಿ ಮಳೆಯಿರಲಿದೆಯೇ, ಇಲ್ಲಿದೆ ವರದಿ

ಮುಂದಿನ ಸುದ್ದಿ
Show comments